ಶಿವಮೊಗ್ಗ | ಕೋಮು ಸಂಘರ್ಷ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ; ಪೊಲೀಸರ ಪಥ ಸಂಚಲನ

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ಸಂಘರ್ಷ ನಿಗ್ರಹಕ್ಕೆ ರಾಜ್ಯ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ತಂದಿರುವ, ವಿಶೇಷ ಕಾರ್ಯಪಡೆ ಪೊಲೀಸರು ಜೂನ್ 19 ರ ಸಂಜೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದ್ದಾರೆ.ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ‘ಕಾನೂನು – ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ, ವಿಶೇಷ ಪಥ ಸಂಚಲನ ನಡೆಸಲಾಗಿದೆ ಎಂದು ತಿಳಿಸಿದೆ.

1001778452

ಎಎ ವೃತ್ತದಿಂದ ಆರಂಭವಾದ ಪಥ ಸಂಚಲನವು ಎಂಕೆಕೆ ರಸ್ತೆ, ಸಿದ್ದಯ್ಯ ವೃತ್ತ, ಬಿ ಬಿ ರಸ್ತೆ, ಸೀಗೆಹಟ್ಟಿ, ಬೈಪಾಸ್ ರಸ್ತೆ, ನ್ಯೂ ಮಂಡ್ಲಿ, ಇಮಾಮ್ ಬಾಡ, ಇಲಿಯಾಸ್ ನಗರ,ಆರ್.ಎಂ.ಎಲ್ ನಗರ, ಟೆಂಪೋ ಸ್ಟ್ಯಾಂಡ್, ಓ ಟಿ ರಸ್ತೆ ಮುಖಾಂತರ ಮತ್ತೆ ಎ ಎ ವೃತ್ತದಲ್ಲಿಯೇ ಅಂತ್ಯಗೊಂಡಿದೆ.ಸದರಿ ಪಥ ಸಂಚಲನದಲ್ಲಿ ವಿಶೇಷ ಕಾರ್ಯಪಡೆಯ ಅಧಿಕಾರಿ – ಸಿಬ್ಬಂದಿಗಳು ಹಾಗೂ ಶಿವಮೊಗ್ಗ ನಗರದ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳು ಭಾಗಿಯಾಗಿದ್ದರು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏನಿದು ಪಡೆ? : ದೇಶದಲ್ಲಿಯೇ ಮೊದಲ ಬಾರಿಗೆ ಕೋಮು ಸಂಘರ್ಷ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋಮು ಸಂಘರ್ಷ ನಿಗ್ರಹ ಪಡೆ ರಚಿಸಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನೂತನ ಪಡೆಯ ಕಚೇರಿ ಉದ್ಘಾಟನೆ ಮಾಡಲಾಗಿತ್ತು.ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಸಂಘರ್ಷ ಮಟ್ಟ ಹಾಕುವ ಉದ್ದೇಶದಿಂದ ಸದರಿ ಪಡೆಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಸದರಿ ಪಡೆಯಲ್ಲಿ 248 ಸಿಬ್ಬಂದಿಗಳಿದ್ದು, ಮೂರು ತುಕಡಿಗಳಲ್ಲಿ ಕಾರ್ಯ ನಿರ್ವಹಿಸಲಿದೆ.ಸದರಿ ಪಡೆ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಗಮನ ಸೆಳೆದಿದೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X