ರಾಯಚೂರು | ಕಲ್ಲಿದ್ದಲು ಕೊರತೆ; ವಿದ್ಯುತ್ ಘಟಕಗಳು ಸ್ಥಗಿತ

Date:

Advertisements

ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್‌ಟಿಪಿಎಸ್‌) ನಾಲ್ಕು ಘಟಕಗಳು ಹಾಗೂ ವೈಟಿಪಿಎಸ್‌ನ ಒಂದು ಘಟಕ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ‌

ಆರ್‌ಟಿಪಿಎಸ್‌ನಲ್ಲಿ 1720 ಮೆವ್ಯಾ ವಿದ್ಯುತ್ ಉತ್ಪಾದಿಸುವ 8 ಘಟಕಗಳಲ್ಲಿ ನಾಲ್ಕು ಘಟಕಗಳು ಸ್ಥಗಿತಗೊಂಡಿವೆ. ಐದನೇ ಘಟಕದಲ್ಲಿಯೂ ಉತ್ಪಾದನೆ ಇಳಿಕೆಯಾಗಿದ್ದು, 430 ಮೆವ್ಯಾ ಮಾತ್ರ ಉತ್ಪಾದನೆಯಾಗುತ್ತಿದೆ. 210 ಮೆವ್ಯಾ ವಿದ್ಯುತ್ ಉತ್ಪಾದಿಸುವ ಒಂದು ಮತ್ತು ಎರಡನೇ ಘಟಕ ಸ್ಥಗಿತಗೊಂಡು ತಿಂಗಳು ಗತಿಸುತ್ತಿದೆ. ಆರನೇ ಘಟಕಕ್ಕೆ ಕಲ್ಲಿದ್ದಲು ಕೊರತೆ, ಏಳನೇ ಘಟಕದಲ್ಲಿ ಕಲ್ಲಿದ್ದಲು ಸಮಸ್ಯೆಯಿಂದ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಭಾರೀ ಮಳೆಯಿಂದ ರಸ್ತೆ, ಬೆಳೆ ಜಲಾವೃತ; ಜನಜೀವನ ಅಸ್ತವ್ಯಸ್ತ

Advertisements

800 ಮೆವ್ಯಾ ವಿದ್ಯುತ್ ಉತ್ಪಾದಿಸುವ ವೈಟಿಪಿಎಸ್ ಎರಡನೇ ಘಟಕ ಬ್ಲಾಯರ್ ಟ್ಯೂಬ್ ಸೋರಿಕೆಯಿಂದಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಒಟ್ಟು 1,720 ಮೆಗಾವ್ಯಾಟ್ ವಿದ್ಯುತ್ ಸಾಮರ್ಥ್ಯವಿರುವ ಕೇಂದ್ರದಿಂದ ಪ್ರಸ್ತುತ ಕೇವಲ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ರಾಯಚೂರು ಸಿಟಿ ಜರ್ನಲಿಸ್ಟ್‌ ಹಫೀಜ್‌ ಅವರ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X