ಮೊದಲ ಟೆಸ್ಟ್‌ನಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌: ಮೂವರು ಕನ್ನಡಿಗರಿಗೆ ಸ್ಥಾನ

Date:

Advertisements

ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಟೆಸ್ಟ್‌ ಸರಣಿ ಆರಂಭವಾಗಿದ್ದು, ಟಾಸ್‌ ಗೆದ್ದಿರುವ ಇಂಗ್ಲೆಂಡ್‌ ತಂಡ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಐದು ಪಂದ್ಯಗಳ ತೆಂಡೂಲ್ಕರ್‌ – ಆಂಡರ್‌ಸನ್‌ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಲೀಡ್ಸ್‌ ಮೈದಾನದಲ್ಲಿ ನಡೆಯುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಆರ್‌ ಅಶ್ವಿನ್‌ ಅವರಂತಹ ಅನುಭವಿಗಳು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವುದರಿಂದ, ಈಗ ತಂಡದ ನಾಯಕತ್ವವನ್ನು ಅನುಭವಿ ಶುಭ್​ಮನ್ ಗಿಲ್ ಹೊತ್ತುಕೊಂಡು ಯುವ ಬ್ರಿಗೇಡ್‌ನ್ನು ಇಂಗ್ಲೆಂಡ್‌ನಲ್ಲಿ ಮುನ್ನಡೆಸಲಿದ್ದಾರೆ. ಸಾಲು ಸಾಲು ಸವಾಲುಗಳನ್ನು ಟೀಮ್ ಇಂಡಿಯಾ ಹೇಗೆ ಮೆಟ್ಟಿ ನಿಲ್ಲುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಗುಜರಾತ್‌ ಟೈಟಾನ್ಸ್‌ ತಂಡದ ಸಾಯಿ ಸುದರ್ಶನ್‌ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

Advertisements

ಸಾಯಿ ಸುದರ್ಶನ್‌ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ದೇಶೀಯ ಟೂರ್ನಿಯಲ್ಲಿ ರನ್‌ಗಳನ್ನು ಪೇರಿಸಿದ್ದರು. ಇವರು ಐಪಿಎಲ್‌ನಲ್ಲಿ ಆಡಿದ 15 ಪಂದ್ಯಗಳಲ್ಲಿ 54ರ ಸರಾಸರಿಯಲ್ಲಿ 759 ರನ್‌ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿದ್ದವು. ಈ ಪ್ರದರ್ಶನದ ಮೂಲಕ ಸಾಯಿ ಸುದರ್ಶನ್‌ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆ ಆಗಿದ್ದಾರೆ.

ಇದನ್ನು ಓದಿದ್ದೀರಾ? ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ

ಶುಭಮನ್‌ ಗಿಲ್‌ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದು, ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್‌ ಬ್ಯಾಟ್‌ ಮಾಡಲಿದ್ದಾರೆ. 11ರ ಬಳಗದಲ್ಲಿ ಇಬ್ಬರು ಆಲ್‌ರೌಂಡರ್‌ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್‌ ಕೀಪರ್‌ ಆಗಿ ರಿಷಭ್‌ ಪಂಥ್‌ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಮೂವರು ಕನ್ನಡಿಗರಿಗೆ ಅವಕಾಶ

ಲೀಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಲಭಿಸಿದೆ. ಆರಂಭಿಕರಾಗಿ ಕೆಎಲ್ ರಾಹುಲ್‌ ಸ್ಥಾನ ಪಡೆದಿದ್ದರೆ, ಕರುಣ್ ನಾಯರ್‌ ಮಧ್ಯಮ ಕ್ರಮಾಂಕದಲ್ಲಿ ಹಾಗೂ ವೇಗದ ಬೌಲರ್‌ ಆಗಿ ಪ್ರಸಿದ್ಧ ಕೃಷ್ಣ ಸ್ಥಾನ ಪಡೆಸಿದ್ದಾರೆ.

ಭಾರತ ಉತ್ತಮ ಆರಂಭ

ಮೊದಲು ಬ್ಯಾಟ್‌ ಮಾಡುತ್ತಿರುವ ಭಾರತ ತಂಡ ಉತ್ತಮ ಆರಂಭ ಪಡೆದಿದ್ದು 11 ಓವರ್‌ಗಳಲ್ಲಿ ವಿಕೇಟ್‌ ನಷ್ಟವಿಲ್ಲದೆ 36 ರನ್‌ ಗಳಿಸಿದೆ. ಯಶಸ್ವಿ ಜೈಸ್ವಾಲ್‌ 23 ರನ್‌ಗಳೊಂದಿಗೆ ಬ್ಯಾಟ್‌ ಮಾಡುತ್ತಿದ್ದರೆ, ಕನ್ನಡಿಗ ಕೆ ಎಲ್‌ ರಾಹುಲ್‌ 12 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.

ಪಂದ್ಯವಾಡುವ ಉಭಯ ತಂಡಗಳ 11ರ ಬಳಗ:

ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌ ಸಿರಾಜ್

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್‌ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X