ಪುನಃ ಅಪಾಯದ ಮಟ್ಟ ಮೀರಿದ ಯಮುನಾ; ದೆಹಲಿಯಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ

Date:

Advertisements

ದೆಹಲಿಯ ಯಮುನಾ ನದಿಯ ನೀರಿನ ಮಟ್ಟವು ಭಾನುವಾರ(ಜುಲೈ 23) ಮತ್ತೆ ಅಪಾಯದ ಮಟ್ಟವನ್ನು ಮೀರಿದೆ.

ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಪರಿಣಾಮ ನದಿಯ ಅಪಾಯದ ಮಟ್ಟ ಮೀರಿದೆ.

ಯಮುನಾ ನದಿಯ ನೀರಿನ ಮಟ್ಟದಲ್ಲಿ ಮತ್ತಷ್ಟು ಹೆಚ್ಚಳದಿಂದ ರಾಜಧಾನಿಯ ಪ್ರವಾಹ ಪೀಡಿತ ತಗ್ಗು ಪ್ರದೇಶಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರನ್ನು ಹರಿಸುವುದರಿಂದ ದೆಹಲಿ ಸರ್ಕಾರವು ಕಟ್ಟೆಚ್ಚರ ವಹಿಸಿದೆ. ನೀರಿನ ಮಟ್ಟ 206.7 ಮೀಟರ್‌ಗೆ ಏರಿದರೆ ಯಮುನಾ ನದಿ ತೀರದ ಕೆಲವು ಭಾಗಗಳು ಜಲಾವೃತವಾಗಬಹುದು ಎಂದು ಕಂದಾಯ ಸಚಿವ ಅತಿಶಿ ತಿಳಿಸಿದ್ದಾರೆ.

ಜುಲೈ 13 ರಂದು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 208.66 ಮೀಟರ್ ತಲುಪಿದ ನಂತರ ಕಳೆದ ಕೆಲವು ದಿನಗಳಿಂದ ನದಿಯ ನೀರಿನ ಮಟ್ಟವು 205.33 ಮೀಟರ್‌ಗಳ ಅಪಾಯದ ಮಟ್ಟದಲ್ಲಿದೆ.

ಶನಿವಾರ(ಜುಲೈ 22) ರಾತ್ರಿ 10 ಗಂಟೆಗೆ 205.02 ಮೀಟರ್ ಇದ್ದ ನೀರಿನ ಮಟ್ಟ ಭಾನುವಾರ(ಜುಲೈ 23) ಬೆಳಗ್ಗೆ 9 ಗಂಟೆಗೆ 205.96 ಮೀಟರ್‌ಗೆ ಏರಿದೆ ಎಂದು ಕೇಂದ್ರ ಜಲ ಆಯೋಗದ(ಸಿಡಬ್ಲ್ಯುಸಿ) ಅಂಕಿಅಂಶಗಳು ತೋರಿಸಿವೆ. ನಾಳೆಯೊಳಗೆ ನದಿಯ ನೀರಿನ ಮಟ್ಟ 206.7 ಮೀಟರ್‌ಗಿಂತಲೂ ಹೆಚ್ಚು ತಲುಪುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ | 20 ಸಾವಿರ ಕಾರು ಮಾಲೀಕರ ಪ್ರತಿ ಕಾರಿನ ಮೇಲೆ 100ಕ್ಕೂ ಹೆಚ್ಚು ಉಲ್ಲಂಘನೆ ಪ್ರಕರಣಗಳು

ಭಾರತೀಯ ಹವಾಮಾನ ಇಲಾಖೆಯು ಜುಲೈ 25 ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಸಿಡಬ್ಲ್ಯುಸಿ ಅಂಕಿಅಂಶಗಳ ಪ್ರಕಾರ, ಯಮುನಾ ನಗರದಲ್ಲಿರುವ ಹತ್ನಿಕುಂಡ್ ಬ್ಯಾರೇಜ್‌ನಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆಗೆ ಹರಿವಿನ ಪ್ರಮಾಣ 1 ಲಕ್ಷದ ಗಡಿ ದಾಟಿದೆ ಮತ್ತು ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ 2 ಲಕ್ಷದಿಂದ 2.5 ಲಕ್ಷ ಕ್ಯೂಸೆಕ್‌ಗಳ ನಡುವೆ ತೂಗಾಡುತ್ತಿದೆ.

ಜುಲೈ 13 ರಂದು ಯಮುನಾ ನದಿಯ ನೀರಿನ ಮಟ್ಟವು ಸೆಪ್ಟೆಂಬರ್ 1978ರ 207.49 ಮೀಟರ್‌ಗಳ ಹಿಂದಿನ ದಾಖಲೆಯನ್ನು ಮೀರಿ 208.66 ಮೀಟರ್‌ಗಳಿಗೆ ಏರಿಕೆಯಾಗಿದೆ. ಪ್ರವಾಹದಿಂದಾಗಿ 27 ಸಾವಿರಕ್ಕೂ ಹೆಚ್ಚು ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಜನಜೀವನ ಅಸ್ತವ್ಯಸ್ತದ ಜೊತೆಗೆ ಕೋಟ್ಯಂತರ ರೂ. ಆಸ್ತಿಪಾಸ್ತಿ ನಷ್ಟವಾಗಿದೆ.

ಮನುಷ್ಯನ ದುರಾಸೆಯ ಅತಿಕ್ರಮಣವೇ ರಾಜಧಾನಿಯ ಹಲವು ನಗರಗಳು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಲು ಕಾರಣ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X