ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ

Date:

Advertisements

ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ನಟ ಶಬರೀಶ್ ಎಂಬುವವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

ನಿರ್ದೇಶಕ ನಂದ ಕಿಶೋರ್ ತಮ್ಮಿಂದ 22 ಲಕ್ಷ ರೂ ಹಣ ಪಡೆದುಕೊಂಡಿದ್ದರು. ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಹಣ ವಾಪಸ್ ಕೊಡುವಂತೆ ಕೇಳಿದರೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ನಟ ಆರೋಪ ಮಾಡಿದ್ದಾರೆ.

ಈ ಸಂಬಂಧ ನಟ ಶಬರೀಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ​​ಗೆ ಈ ಬಗ್ಗೆ ದೂರು ನೀಡುವುದಾಗಿ ಹೇಳಿದ್ದು, ಕೂಡಲೇ ವಾಣಿಜ್ಯ ಮಂಡಳಿ ತನ್ನ ದೂರು ಸ್ವೀಕರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್; ಮೂರು ದಿನದಲ್ಲಿ ಉತ್ತರಿಸಲು ಸೂಚನೆ

ಕಿಚ್ಚ ಸುದೀಪ್ ಅವರ ಅಭಿಮಾನಿ ಆಗಿರುವ ಶಬರೀಶ್ ಶೆಟ್ಟಿ ಆರೋಪಿಸಿರುವಂತೆ, ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶಬರೀಶ್ ಅವರನ್ನು ಸಿಸಿಎಲ್​​ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರಂತೆ. ಇದಕ್ಕಾಗಿ ಶಬರೀಶ್ ತನ್ನ ಮನೆಯಲ್ಲಿದ್ದ ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೂ ನಂದ ಕಿಶೋರ್ ಅವರು ತಮಗೆ ಹಣ ಮರಳಿಸಿಲ್ಲ ಎಂದು ಶಬರೀಶ್ ಆರೋಪಿಸಿದ್ದಾರೆ. ಹಣ ಮರಳಿಸುವಂತೆ ಕೇಳಿದರೆ ಬೆದರಿಕೆ ಹಾಕುತ್ತಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರು ಹೇಳಿ ಯಾಮಾರಿಸಿದರು. ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನಗೆ ಮೋಸ ಮಾಡಿದ್ದಾರೆ. ನಾನು ಕೊಟ್ಟ ಹಣವೂ ವಾಪಸ್ ಕೊಟ್ಟಿಲ್ಲ. ಸಿನಿಮಾದಲ್ಲಿ ಅವಕಾಶವನ್ನು ಕೊಡಲಿಲ್ಲ, ನಾನು ಸಿಸಿಎಲ್‌ನಲ್ಲಿ ಆಡುವ ಕನಸು ಕಟ್ಟಿಕೊಂಡಿದ್ದೆ. ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಆವೃತ್ತಿ ಆಡಿದ್ದೇನೆ. ಹಣ ಕೇಳಿದರೆ ನಿನ್ನ ಕೆಸಿಸಿಯಿಂದ ಹೊರ ಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಶಬರೀಶ್ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X