ಶಿವಮೊಗ್ಗ | ಜೂನ್ ೨೧-೨೨ರ ನಾಳೆ, ನಾಡಿದ್ದು ಸಂವಿಧಾನ ಓದು ಶಿಬಿರ

Date:

Advertisements

ಸಂವಿಧಾನ ಓದು ಅಭಿಯಾನ ಕರ್ನಾಟಕ, ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರವು ಜೂನ್ ೨೧-೨೨ರ ವರೆಗೆ ಎರಡು ದಿನಗಳ ಕಾಲ ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಸನ್ನಿಧಿ ಸೆಂಟರ್‌ನಲ್ಲಿ ನಡೆಯಲಿದೆ. ಅಧ್ಯಯನ ಶಿಬಿರವನ್ನು ಜೂ.೨೧ ರಂದು ಬೆಳಿಗ್ಗೆ ೧೦ ಕ್ಕೆ ಕ್ಕೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್‌ರವರು ಉದ್ಘಾಟನೆ ಮಾಡಲಿದ್ದಾರೆ.

ಸಚಿವ ಮಧುಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಮಲ್ಲಿಗೇನಹಳ್ಳಿಯ ಸನ್ನಿಧಿ ಪಾಲನಾ ಕೇಂದ್ರದ ನಿರ್ದೇಶಕ ಫಾ. ಕ್ಲಿಫರ್ಡ್ ರೋಷನ್ ಪಿಂಟೋ, ಹಿರಿಯ ವಕೀಲ ಜಿ.ಎಸ್. ನಾಗರಾಜ್, ವಕೀಲ ವಿಜಯ್, ರಂಗಕರ್ಮಿ ಆರ್.ಎಸ್. ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿರುವರು.ಜೂ.೨೧ರಂದು ನಡೆಯುವ ವಿವಿಧ ಗೋಷ್ಠಿಗಳಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್, ಬಿ. ರಾಜಶೇಖರಮೂರ್ತಿ. ಆರ್. ರಾಮಕೃಷ್ಣ ಉಪನ್ಯಾಸ ನೀಡುವರು.

1001780737

ಜೂ.೨೨ರಂದು ಎರಡು ಗೋಷ್ಠಿಗಳಿದ್ದು, ಸಂವಿಧಾನ ಮತ್ತು ಮಹಿಳೆ ಕುರಿತು ಶಾಂತಿ ನಾಗಲಪುರ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕುರಿತು ಕಿಗ್ಗ ರಾಜಶೇಖರ್ ಮಾತನಾಡುವರು ಎಂದರು.ಮಧ್ಯಾಹ್ನ ೧ಕ್ಕೆ ಸಮಾರೋಪ ಹಾಗೂ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು.

Advertisements

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ರೈತ ಮುಖಂಡ ಹೆಚ್.ಆರ್. ಬಸವರಾಜಪ್ಪ, ದ.ಸಂ.ಸ ಮುಖಂಡ ಎಂ. ಗುರುಮೂರ್ತಿ, ವಕೀಲ ಅನಂತನಾಯಕ್, ಜನಶಕ್ತಿ ಸಂಘಟನೆಯ ಕೆ.ಎಲ್. ಅಶೋಕ್, ಅನಂತರಾಮು ಮತ್ತಿತರರು ಭಾಗವಹಿಸುವರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X