ಅಂತರ್ಜಾತಿ ವಿವಾಹ | ಶುದ್ಧೀಕರಣ ಹೆಸರಲ್ಲಿ ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು

Date:

Advertisements

ತಮ್ಮ ಮನೆಯ ಯುವತಿ ಅಂತರ್ಜಾತಿ ವಿವಾಹವಾಗಿದ್ದನ್ನು ವಿರೋಧಿಸಿ ಕುಟುಂಬವೊಂದರ 40 ಸದಸ್ಯರು ತಲೆ ಬೋಳಿಸಿಕೊಂಡು ಶುದ್ಧೀಕರಣ ಆಚರಣೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ರಾಯಗಡ ಜಿಲ್ಲೆಯ ಬೈಗನಗುಡ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಯುವತಿಯೊಬ್ಬರು ಮತ್ತೊಂದು ಜಾತಿಯ ಯುವಕನೊಂದಿಗೆ ವಿವಾಹವಾಗಿದ್ದಾರೆ. ಈ ವಿವಾಹವನ್ನು ವಿರೋಧಿಸಿದ್ದ ಯುವತಿಯ ಕುಟುಂಬಸ್ತರು ಶುದ್ಧೀಕರಣದ ಹೆಸರಿನಲ್ಲಿ ತಲೆ ಬೋಳಿಸಿಕೊಂಡು, ಪೂಜೆ ಸಲ್ಲಿಸಿದ್ದಾರೆ. ಸ್ಥಳೀಯ ದೇವರ ಮುಂದೆ ಮೇಕೆ, ಕೋಳಿ ಹಾಗೂ ಹಂದಿಗಳನ್ನು ಬಲಿ ಕೊಟ್ಟಿದ್ದಾರೆ.

ಬುಡಕಟ್ಟು ಸಮುದಾಯದ ಯುವತಿ ಹಲವು ವರ್ಷಗಳಿಂದ ದಲಿತ ಯುವಕನನ್ನು ಪ್ರೀತಿಸುತ್ತಿದ್ದರು. ಆದರೆ, ಯುವಕ ಬುಡಕಟ್ಟು ಸಮುದಾಯಕ್ಕೆ ಸೇರಿಲ್ಲ ಎಂಬ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಅವರ ಪ್ರೀತಿಯನ್ನು ವಿರೋಧಿಸಿದ್ದರು. ಕುಟುಂಬದ ವಿರೋಧದ ನಡುವೆಯೂ ಪ್ರೀತಿಮಗಳು ಇತ್ತೀಚೆಗೆ ವಿವಾಹವಾಗಿದ್ದರು ಎಂದು ವರದಿಯಾಗಿದೆ.

Advertisements

ಈ ಲೇಖನ ಓದಿದ್ದೀರಾ?: ಇಸ್ರೇಲ್-ಇರಾನ್ ಸಂಘರ್ಷ | ತನ್ನದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ ಇಸ್ರೇಲ್!

ತಮ್ಮ ಪದ್ದತಿಯಲ್ಲಿ ಅಂತರ್ಜಾತಿ ವಿವಾಹಕ್ಕೆ ಅವಕಾಶ ಇಲ್ಲ ಎಂಬ ಕಾರಣಕ್ಕೆ ಯುವತಿಯು ಕುಟುಂಬವು ಶುದ್ಧೀಕರಣದ ಆಚರಣೆ ನಡೆಸಿದೆ. ತಮ್ಮ ಪದ್ಧತಿಯ ಪ್ರಕಾರ, ಬುಡಕಟ್ಟು ಜನಾಂಗದ ಹೊರಗೆ ಮಹಿಳೆ ವಿವಾಹವಾದರೆ, ಇಡೀ ಕುಟುಂಬವು ಗ್ರಾಮ ದೇವತೆಯ ಕೋಪಕ್ಕೆ ಗುರಿಯಾಗುತ್ತದೆ. ಹೀಗಾಗಿ, ದೇವತೆಯನ್ನು ಶಾಂತಿಗೊಳಿಸಲು ಶುದ್ಧೀಕರಣ ಮತ್ತು ಬಲಿ ಕೊಟ್ಟಿರುವುದಾಗಿ ಕುಟುಂಬವು ಹೇಳಿಕೊಂಡಿದೆ.

ಈ ಆಚರಣೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾನದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡು ಜಿಲ್ಲಾಡಳಿತವು ಘಟನೆ ಬಗ್ಗೆ ತಿನಿಖೆ ನಡೆಸಲು ಕಾಶಿಪುರದ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ (ಬಿಡಿಒ) ಸೂಚನೆ ನೀಡಿದೆ.

ಅಧಿಕಾರಿಗಳ ತಂಡವು ಗ್ರಾಮಕ್ಕೆ ಭೇಟಿ ನೀಡಿದ್ದು, ನವ ದಂಪತಿಗಳ ಕುಟುಂಬಗಳನ್ನು ಭೇಟಿ ಮಾಡಿದೆ. ತಮ್ಮ ಪದ್ದತಿಯ ಭಾಗವಾಗಿ ಪೂಜೆ-ಆಚರಣೆ ಮಾಡಿರುವುದಾಗಿ ಕುಟುಂಬವು ಹೇಳಿಕೊಂಡಿದೆ ಎಂದು ವದರಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X