ಶಿವಮೊಗ್ಗ | ಸಚಿವ ಮಧು ಬಂಗಾರಪ್ಪಗೆ ಬಿಸಿಯೂಟ ತಯಾರಕರ ಫೆಡರೇಶನ್ ನಿಂದ ಮನವಿ

Date:

Advertisements

ಶಿವಮೊಗ್ಗದಲ್ಲಿ ಬಿಸಿ ಊಟ ತಯಾರಕರ ಬೇಡಿಕೆಗಳನ್ನು ಈಡೇರಿಸಬೇಕು ಅದಕ್ಕಾಗಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಬೇಕು ಎಂದು ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ( ಎ ಐ ಟಿ ಯು ಸಿ) ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಕಳೆದ 24 ವರ್ಷಗಳಿಂದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕಿರಿಯ ಕಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಲ್ಲಿ ಅಡುಗೆಯವರಾಗಿ ಕೆಲಸ ನಿರ್ವಹಿಸುತ್ತಿರುವ ಬಿಸಿಊಟ ತಯಾರಕರ ಬೇಡಿಕೆಗಳು ಇನ್ನೂ ಈಡೇರಿಲ್ಲ ತಕ್ಷಣವೇ ಸರ್ಕಾರ ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿದಾರರು ತಿಳಿಸಿದರು.

ಸ್ಕೀಮ್ ವರ್ಕರ್ಸ್ ಎನ್ನುವುದನ್ನು ಬದಲಾಯಿಸಿ ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು. ನಿವೃತ್ತಿ ಬಿಸಿಊಟ ತಯಾರಿಕರಿಗೆ ಇಡೀ ಗಂಟು ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ,ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾದಾಗ ಬಿಸಿ ಊಟ ತಯಾರಕರನ್ನು ಅಡಿಗೆ ಕೆಲಸದಿಂದ ಯಾವುದೇ ಕಾರಣಕ್ಕೂ ಬಿಡುಗಡೆಗೊಳಿಸಬಾರದು, ಒಂದು ಪಕ್ಷ ಬಿಡುಗಡೆಗೊಳಿಸುವುದೇ ಆದರೆ ಅವರಿಗೂ ಹಿಡಿಗಂಟು ಹಣ ಕೊಡಬೇಕು, 100 ವಿದ್ಯಾರ್ಥಿಗಳು ಇರುವ ಶಾಲೆಯಲ್ಲಿ ಎರಡು ಜನ ಅಡಿಗೆ ಅವರಿಗೆ ಕೆಲಸದ ಹೊರೆಯಾಗುತ್ತಿದ್ದು ಅದನ್ನು ಹೆಚ್ಚಿಸಬೇಕು, ಬಿಸಿಊಟ ತಯಾರಿಕರಿಗೆ ಗೌರವಧನವನ್ನು ಅವರ ಬ್ಯಾಂಕ್ ಖಾತೆಗೆ ಸರಿಯಾದ ಸಮಯದಲ್ಲಿ ಜಮಾ ಆಗುವಂತೆ ನೋಡಿಕೊಳ್ಳಬೇಕು, ಬಿಸಿಯೂಟ ತಯಾರಿಕರಿಗೆ 10 ಲಕ್ಷ ಮರಣ ಪರಿಹಾರ ಜಾರಿಗೊಳಿಸಬೇಕು, ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯಲ್ಲಿ ತಿಳಿಸಲಾಗಿದೆ.

Advertisements

ಈ ಸಂದರ್ಭದಲ್ಲಿ ಬಿಸಿ ಊಟ ತಯಾರಕರ ಫೆಡರೇಷನ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ ಜಿ ಅಕ್ಕಮ್ಮ ಪದಾಧಿಕಾರಿಗಳಾದ ಉಮಾ, ಸರೋಜಮ್ಮ, ಹುಲಿಗಮ್ಮ, ಗೌರಮ್ಮ, ಶಾರದಮ್ಮ ಸೇರಿದಂತೆ ಹಲವರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X