ರೈಲಿನಲ್ಲಿ ಸೀಟು ವಿಚಾರಕ್ಕೆ ಗಲಾಟೆ: ಯುವಕನನ್ನು ಹೊಡೆದು ಕೊಂದ ದುಷ್ಟ ಪ್ರಯಾಣಿಕರ ಗುಂಪು

Date:

Advertisements

ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಖೇಕ್ಡಾ ಪಟ್ಟಣದ ನಿವಾಸಿ ದೀಪಕ್ ಯಾದವ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ದೆಹಲಿಯಿಂದ ತಮ್ಮೂರಿಗೆ ಮರಳುತ್ತಿದ್ದರು. ಅವರು ಸಹರಾನ್‌ಪುರಕ್ಕೆ ಹೋಗುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಖೇಕ್ಡಾ ಬಳಿ ಚಲಿಸುತ್ತಿದ್ದಾಗ ಗುಂಪೊಂದು ಸೀಟಿನ ವಿಚಾರಕ್ಕೆ ಅವರೊಂದಿಗೆ ಗಲಾಟೆ ಆರಂಭಿಸಿತು ಎಂದು ವರದಿಯಾಗಿದೆ.

ಗಲಾಟೆ ಎಷ್ಟು ಗಂಭೀರ ಸ್ವರೂಪಕ್ಕೆ ಹೋಯಿತೆಂದರೆ, ದುಷ್ಕರ್ಮಿಗಳ ಗುಂಪು ಯಾದವ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಯಾದವ್ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದರು. ಘಟನೆ ಬಗ್ಗೆ ಮಾಹಿತಿ ದೊರೆತ ಕೂಡಲೇ ಖೇಕ್ಡಾ ನಿಲ್ಧಾಣದಲ್ಲಿ ರೈಲನ್ನು ನಿಲ್ಲಿಸಲಾಯಿತು. ರೈಲು ನಿಲ್ಲುತ್ತಿದ್ದಂತೆಯೇ ದುಷ್ಕರ್ಮಿಗಳು ಇಳಿದು ಪರಾರಿಯಾಗಿದ್ದಾರೆ. ಯಾದವ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisements

ಸ್ಥಳಕ್ಕೆ ಬಂದ ಜಿಆರ್‌ಪಿ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆಸಿದ್ದಾರೆ. ತನಿಖೆ ಆರಂಭಿಸಿದ್ದಾರೆ. ಕೆಲವು ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ, ಬಂಧಿಸುತ್ತೇವೆಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X