ಕೊಪ್ಪಳ | ಬಿಎಸ್‌ಪಿಎಲ್ ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ: ಸಂಸದ ಹಿಟ್ನಾಳ್

Date:

Advertisements

ಕೊಪ್ಪಳದ ಬಲ್ಡೋಟಾ ವಿಸ್ತರಣೆ ಹಾಗೂ ಬಿಎಸ್‌ಪಿಎಲ್, ಎಮ್‌ಎಸ್‌ಪಿಎಲ್ ಕಾರ್ಖಾನೆಗಳು ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ಕೆ ರಾಜಶೇಖರ್‌ ಹಿಟ್ನಾಳ್‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆಯ ಆಹ್ವಾನದ ಮೇರೆಗೆ ಕಾರ್ಖಾನೆಗಳ ವಿರುದ್ಧ ಹೋರಾಟದ ಬಗ್ಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, “ಕಾರ್ಖಾನೆಗಳ ಹೊಗೆ ಹಾಗೂ ಧೂಳಿನಿಂದ ಈಗಾಗಲೇ 25-30 ಹಳ್ಳಿಗಳ ಪರಿಸರ ನಾಶ ಆಗಿ ಅಲ್ಲಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕೊಪ್ಪಳ ಇರಬೇಕು ಇಲ್ಲವೇ ಬಲ್ಡೋಟಾ ಕಾರ್ಖಾನೆ ಇರಬೇಕು. ಈ ಹೋರಾಟ ಹೀಗೆ ಮುಂದುವರೆಯಲಿ, ಇದಕ್ಕೆ ಶಾಸಕರು ಹಾಗೂ ನಾನು ಸಂಪೂರ್ಣವಾದ ಬೆಂಬಲ ಕೊಡುತ್ತೇವೆ” ಎಂದರು.

ಜನಪ್ರತಿನಿಧಿಗಳೊಂದಿಗೆ ಸಂವಾದ ಮಾಲಿಕೆಯಲ್ಲಿ ಮುಂದೆ ಶಾಸಕ ರಾಘವೇಂದ್ರ ಹಿಟ್ನಾಳ್ ಅವರೊಡನೆ ಜಂಟಿ ಹೋರಾಟ ಸಮಿತಿಯಿಂದ ಸಂವಾದ ನಡೆಸಲಾಗುವುದು. ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳು ಸರ್ಕಾರದಿಂದ
ಬಲ್ಡೋಟಾ ಕಂಪನಿ ವಿಸ್ತರಣೆ ಮಾಡದಂತೆ ಪತ್ರ ತರಬೇಕೆಂದು ಕೊಪ್ಪಳ ಜನತೆಯ ಪರವಾಗಿ ಆದೇಶಿಸಿದ್ದರು. ಸರಕಾರದಿಂದ ತಾತ್ಕಾಲಿಕ ತಡೆ ನೀಡಲಾಗಿದೆ. ಪೂರ್ಣ ಪ್ರಮಾಣದಲ್ಲಿ ತಡೆ ನೀಡಬೇಕೆಂಬುದು ನಾಗರಿಕರ ಕೋರಿಕೆಯಾಗಿದೆ. ಸ್ವಾಮಿಗಳು ಜನಪ್ರತಿನಿಧಿಗಳನ್ನು ಈ ಹಿನ್ನೆಲೆಯಲ್ಲಿ ಪ್ರಶ್ನಿಸಬೇಕೆಂದು ಜನತೆಯ ಆಶಯವಾಗಿದೆ. ಎಂದು ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ಸಮಿತಿ ವೇದಿಕೆ ಅಭಿಪ್ರಾಯಕ್ಕೆ ಬರಲಾಯಿತು.

Advertisements

ಇದನ್ನೂ ಓದಿ: ಕೊಪ್ಪಳ | ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಎಸ್‌ಎಫ್‌ಐ ಆಗ್ರಹ

ಅಲ್ಲಮಪ್ರಭು ಬೆಟ್ಟದೂರು, ಬಸವರಾಜ್ ಶೀಲವಂತರ, ಡಿ‌ಎಮ್ ಬಡಿಗೇರ, ಮಹಾಮತೇಶ ಕೊತಬಾಳ, ಕೆ.ಬಿ ಗೊನಾಳ ಶರಣು ಶೆಟ್ಟರ, ಶರಣು ಗಡ್ಡಿ, ಶರಣು ಪಾಟೀಲ, ಮಂಜುನಾಥ ಗೊಂಡಬಾಳ, ಮುದಕಪ್ಪ ಹೊಸಮನಿ, ಸೋಮರಡ್ಡಿ ಅಳವಂಡಿ, ರಾಜು ಬಾಕಳೆ, ಡಾ. ಮಂಜುನಾಥ ಸಜ್ಜನ್, ಎಸ್.ಎ.ಗಫಾರ್, ಗವಿಸಿದ್ದಪ್ಪ ಹಲಗಿ, ಹನುಮಂತಪ್ಪ ಗೊಂದಿ, ಮಲ್ಲಪ್ಪ ಬಂಡಿ, ಶಾಂತಪ್ಪ ಅಂಗಡಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X