ಚಿತ್ರದುರ್ಗ | ಯೋಗದಿಂದ ಸಾಹಸ, ಧೈರ್ಯ, ಬುದ್ಧಿಶಕ್ತಿ ವರ್ಧನೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ರಕ್ಷಣೆ; ಭೋವಿ ಪೀಠದ ಸಿದ್ದರಾಮೇಶ್ವರ ಶ್ರೀ

Date:

Advertisements

“ಯೋಗಶಾಸ್ತ್ರದ ನಿರಂತರವಾದ ಅನುಷ್ಠಾನದಿಂದ ಜೀವನೋತ್ಸಾಹ, ಸಾಹಸ, ಧೈರ್ಯ, ಬುದ್ಧಿಶಕ್ತಿ, ಪರಾಕ್ರಮಗಳು ವರ್ಧಿಸುತ್ತವೆ. ಯೋಗಶಾಸ್ತ್ರವು ಪ್ರಾಯೋಗಿಕವಾಗಿದ್ದು, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ರಕ್ಷಣೆಯಲ್ಲಿ ಸಹಕಾರಿಯಾಗಿದೆ” ಎಂದು ಚಿತ್ರದುರ್ಗದ
ಭೋವಿ ಗುರುಪೀಠದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ತಿಳಿಸಿದರು.

ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಎಸ್ ಜೆ ಎಸ್ ಸಮೂಹ ಸಂಸ್ಥೆಗಳಿಂದ ನಡೆದ ಯೋಗ ದಿನಾಚರಣೆಯ ಸಾನ್ನಿಧ್ಯವಹಿಸಿ ಮಾತನಾಡಿದ ಪೂಜ್ಯರು ಆಸನಗಳ ಅಭ್ಯಾಸವೊಂದೇ ಯೋಗವಲ್ಲ. ದೇಹದಲ್ಲಿರುವ ಸಪ್ತಧಾತುಗಳಾದ ರಸ, ರಕ್ತ, ಮಾಂಸ ಮೇಧ, ಅಸ್ತಿ, ಮಜ್ಜ ಮತ್ತು ವೀರ್ಯಗಳ ಅಸಮತೋಲನವನ್ನು ಹೋಗಲಾಡಿಸಿ ದೇಹಾರೋಗ್ಯ ಕಾಪಾಡುವುದು ಆಸನಗಳ ಗುರಿ. ದೇಹದಲ್ಲಿರುವ ರೋಗಗಳ ನಿರ್ಮೂಲನ ಮತ್ತು ಆಗಾಮಿ ರೋಗಗಳ ಪ್ರತಿಬಂಧವು ಆಸನಾಭ್ಯಾಸದಿಂದ ಸಾಧ್ಯವಾಗುತ್ತದೆ. ಅಂತೆಯೇ ಪ್ರಾಣಾಯಾಮವು ಶ್ವಾಸೋಚ್ಛಾಸದ ಗತಿಯನ್ನು ನಿಯಂತ್ರಿಸಿ ಆಹಾರದ ಪಚನ ಕ್ರಿಯೆಯನ್ನು ಸರಿಪಡಿಸಿ ಚಂಚಲವಾದ ಚಿತ್ತವನ್ನು ನಿಶ್ಚಲಗೊಳಿಸುತ್ತದೆ ಎಂದು ವಿವರಿಸಿದರು.

1002196538

“ದೈನಂದಿನ ಜೀವನದಲ್ಲಿ ಯೋಗವು ಮನಸ್ಸನ್ನು ಶಾಂತ ಮತ್ತು ಸ್ಥಿರವಾಗಿರಿಸುತ್ತದೆ, ಒತ್ತಡವನ್ನು ತೆಗೆದುಹಾಕುತ್ತದೆ ಮತ್ತು ಆಲೋಚನಾ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ನಿಯಮಿತ ಯೋಗ ಅಭ್ಯಾಸದಿಂದ ನಮ್ಮ ದೇಹ ಹಾಗೂ ಮನಸ್ಸಿಗೆ ಸಂತೋಷ-ಶಕ್ತಿಯನ್ನು ನೀಡುತ್ತದೆ. ಆಹಾರ ಮತ್ತು ನಿದ್ರೆಗಳಂತೆ ಈ ಅಭ್ಯಾಸಕ್ಕೂ ನಿಗದಿತವಾದ ಸಮಯವನ್ನು ಮೀಸಲಿಡುವುದು ಅಗತ್ಯ” ಎಂದು ಸಲಹೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ವಿಮೆ ಯೋಜನೆಯಡಿ ರೈತರ ನೋಂದಣಿಗೆ ಜುಲೈವರೆಗೆ ಕಾಲಾವಕಾಶ

ಈ ಸಂದರ್ಭದಲ್ಲಿ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಧರ, ಎಸ್ ಜೆ ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ದಿನೇಶ, ಎಸ್ ಜೆ ಎಸ್ ಸಮೂಹ ಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಪೋಷಕರು, ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಯೋಗ ಪ್ರಾತ್ಯಕ್ಷಿಕೆ ಜರುಗಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X