ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ: ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

Date:

Advertisements
  • ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ: ಆರೋಪ
  • ಆರೋಗ್ಯ ತಪಾಸಣೆಗೆ ಕುಮಾರಸ್ವಾಮಿ ಸಿಂಗಾಪುರಗೆ ತೆರಳಿದ್ದಾರೆ ಎನ್ನಲಾಗಿದೆ

ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿ‌ದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಪ್ರಯತ್ನಗಳು ನಡೆದಿವೆ. ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ” ಎಂದು ಹೆಸರು ಹೇಳಲು ಇಚ್ಚಿಸದೇ ಪರೋಕ್ಷವಾಗಿ ಎಚ್‌ ಡಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ಎಳೆ ಹಿಡಿದು ಮಾತನಾಡಿದ್ದಾರೆ.

ಆರೋಗ್ಯ ತಪಾಸಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿಂಗಾಪುರಗೆ ತೆರಳಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಹಲವು ಬಾರಿ ಸಿಂಗಾಪುರಕ್ಕೆ ಕುಮಾರಸ್ವಾಮಿ ಹೋಗಿದ್ದರು. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ಕುಮಾರಸ್ವಾಮಿ ಸಿಂಗಾಪುರದಲ್ಲಿ ಇದ್ದಾಗಲೇ ರಾಜ್ಯದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮೈತ್ರಿ ಸರ್ಕಾರ ಅಲುಗಾಡಿತ್ತು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X