ಸಿಕ್ಸ್ ಬಾರಿಸಿ ಶತಕ ಪೂರೈಸಿದ ರಿಷಭ್ ಪಂತ್‌: ಧೋನಿಯ ದಾಖಲೆ ಬ್ರೇಕ್

Date:

Advertisements

ಶನಿವಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್‌ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ, ಪಂತ್ ಎಂಎಸ್ ಧೋನಿ ಮತ್ತು ವೃದ್ಧಿಮಾನ್ ಸಹಾ ಅವರಂತಹ ಭಾರತೀಯ ವಿಕೆಟ್‌ಕೀಪರ್‌ಗಳ ದಾಖಲೆಯನ್ನು ಮುರಿದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟದ ವಿರಾಮದ ವೇಳೆಗೆ ಭಾರತ 454 ರನ್‌ಗಳನ್ನು ಪೇರಿಸಿದೆ. ರಿಷಭ್ ಪಂತ್ ಮತ್ತು ಶುಭಮನ್ ಗಿಲ್ ಅಧಿಕ ರನ್‌ಗಳನ್ನು ಬಾರಿಸಿದ್ದಾರೆ. ಗಿಲ್ ಮತ್ತು ಪಂತ್ 4ನೇ ವಿಕೆಟ್‌ಗೆ 209 ರನ್‌ಗಳ ಜೊತೆಯಾಟವಾಡಿದ್ದಾರೆ.

ಇದನ್ನು ಓದಿದ್ದೀರಾ? ಪಂತ್‌ ಸತತ ವೈಫಲ್ಯಕ್ಕೆ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ಮಾಲೀಕ ಸಂಜೀವ್ ಗೋಯೆಂಕಾ

Advertisements

ರಿಷಭ್ ಪಂತ್ 178 ಎಸೆತಗಳಲ್ಲಿ 134 ರನ್‌ ಗಳಿಸಿದ್ದು ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಆರು ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ಎಂಎಸ್ ಧೋನಿ ಮತ್ತು ವೃದ್ಧಿಮಾನ್ ಸಹಾ ಅವರ ದಾಖಲೆಯನ್ನು ಮೀರಿಸಿದ್ದಾರೆ. ಧೋನಿ ಆರು ಬಾರಿ ಶತಕ ಗಳಿಸಿದ್ದರೆ, ಪಂತ್ ಏಳು ಶತಕಗಳನ್ನು ಗಳಿಸಿದ್ದಾರೆ. ವೃದ್ಧಿಮಾನ್ ಸಹಾ ಮೂರು ಬಾರಿ ಶತಕ ಗಳಿಸಿದ್ದಾರೆ.

ಜೊತೆಗೆ ಒಂದೇ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಮೂರು ಭಾರತೀಯ ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿರುವುದು ಇದು ನಾಲ್ಕನೇ ಬಾರಿ. 1986ರಲ್ಲಿ ಸುನಿಲ್ ಗವಾಸ್ಕರ್, ಕ್ರಿಸ್ ಶ್ರೀಕಾಂತ್ ಮತ್ತು ಮೊಹಿಂದರ್ ಅಮರ್‌ನಾಥ್ ಆಸ್ಟ್ರೇಲಿಯಾ ವಿರುದ್ಧ ಮೊದಲ ಬಾರಿ ಶತಕ ಗಳಿಸಿದ್ದರು.

ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅಜೇಯ 118 ರನ್ ಗಳಿಸಿದ ನಂತರ ಪಂತ್ ಅವರ ಸತತ ಎರಡನೇ ಶತಕ ಇದಾಗಿದೆ. ಪಂತ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಿಕ್ಸ್ ಬಾರಿಸಿ ಶತಕ ಪೂರೈಸಿದ್ದು ಇದು ಮೂರನೇ ಬಾರಿ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X