ವಿಶ್ವಕರ್ಮ ಸಮುದಾಯದ ಯುವಕರು ಜಾಗೃತರಾಗಬೇಕು; ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿ ಕರೆ

Date:

Advertisements

“ವಿಶ್ವಕರ್ಮ ಸಮುದಾಯದ ಯುವಕರು ಜಾಗೃತರಾಗುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳುವ ಕೆಲಸವಾಗಬೇಕು” ಎಂದು ವಿಶ್ವಕರ್ಮ ಸಂಪನ್ಮೂಲ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿಗಳು ಯುವಕರಿಗೆ ಕಿವಿ ಮಾತು ಹೇಳಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ರಾಜ್ಯಮಟ್ಟದ ಸಮಾವೇಶ ಹಾಗು ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದಲ್ಲಿ ಮಕ್ಕಳು 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಸಮುದಾಯಕ್ಕೆ ಉತ್ತಮ ಸಂದೇಶವನ್ನು ನೀಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಶೈಕ್ಷಣಿಕವಾಗಿ ಮಕ್ಕಳು ಹೆಚ್ಚು ಮುಂದೆ ಬರಬೇಕು ಎಂದು ಹೇಳಿದರು.

ವಿಶ್ವಕರ್ಮ ಸಮಾಜ ಒಳ್ಳೆಯ ಚಿಂತನೆಗಳನ್ನು ಇಟ್ಟುಕೊಂಡು ಬೆಳೆದು ಬಂದಿದೆ. ಸಮುದಾಯ ಜಾಗೃತ ವಾಗಬೇಕಾದರೆ ಮಠಾಧಿಪತಿಗಳು, ಸ್ವಾಮಿಜಿಗಳು ಮುನ್ನೆಲೆಗೆ ಬರಬೇಕು. ಪ್ರತಿ ಜಿಲ್ಲೆಗಳಲ್ಲೂ ಧರ್ಮದ ಉದ್ದಾರ, ಸಮಾಜ ಬೆಳೆಸುವ ಕೆಲಸವನ್ನು ಸ್ವಾಮೀಜಿಗಳು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ಸಮಾಜದಲ್ಲಿ ಯಾರ ಮೇಲೂ ದ್ವೇಷವಿಲ್ಲ, ತಾರತಮ್ಯ ಮಾಡುವುದಿಲ್ಲ. ವಿಶ್ವಕರ್ಮ ಸಮಾಜದವರು ನಾವೆಲ್ಲ ಒಂದೇ ಎಂಬ ಭಾವನೆಯಿಂದ ಕೂಡಿ ಸಮಾಜದ ಚಿಂತನೆಗಳ ಬಗ್ಗೆ ಗಮನಹರಿಸಬೇಕು ಎಂದು ಸಮುದಾಯಕ್ಕೆ ಸಂದೇಶವನ್ನು ಸಾರಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಸಮುದಾಯದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರಳಿ ಮಾತನಾಡಿ, ಸಮುದಾಯದಲ್ಲಿ ದುಡಿಯುತ್ತಿರುವ ಹಾಗೂ ಶೈಕ್ಷಣಿಕವಾಗಿ ಮುಂದೆ ಬರುವ ನಿಟ್ಟಿನಲ್ಲಿ ಮಕ್ಕಳಿಗೆ ಪ್ರತಿ ವರ್ಷವೂ ಸಹ ಪ್ರತಿಭಾ ಪುರಸ್ಕಾರ ಹಾಗೂ ವಿಶ್ವಕರ್ಮ ಪ್ರಶಸ್ತಿಯನ್ನು ನೀಡುತ್ತಾ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ನಾವು ಯಾವತ್ತೂ ಸಹ ಸಮಾಜದ ಸುಧಾರಣೆಗೆ, ಅಭಿವೃದ್ಧಿಗೆ ಸದಾ ಮುಂದೆ ಇರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements
WhatsApp Image 2025 06 21 at 18.50.15

ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿರುವ ಜಯಸೂರ್ಯ ಹಾಗೂ ಪಿಯುಸಿಯಲ್ಲಿ ಆದಿತ್ಯ ಅವರು ಶೇಕಡ 99 ಅಂಕಗಳನ್ನು ಪಡೆಯುವ ಮೂಲಕ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಇನ್ನು ಇದೇ ವೇಳೆ ಸಮುದಾಯದ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ 10 ಜನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು‌.

ಸಮಾವೇಶದಲ್ಲಿ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿಎಸ್ ಶಿವಣ್ಣ, ಸಮುದಾಯದ ಮಠಾಧೀಶರು, ಸ್ವಾಮೀಜಿಗಳು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿಶ್ವಕರ್ಮ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X