ಉತ್ತರ ಕನ್ನಡ | ಸೀ ಬರ್ಡ್ ಸಂತ್ರಸ್ತರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳು ವೈದ್ಯ

Date:

Advertisements

ನೌಕಾನೆಲೆಗಾಗಿ ಭೂಸ್ವಾಧೀನ ಪ್ರಕರಣಗಳಲ್ಲಿ ಪತೀಕ್ಷಿಸಿದ್ದ ಹೆಚ್ಚುವರಿ ಪರಿಹಾರ ಹಣವೀಗ ಹಂತ ಹಂತವಾಗಿ ವಿತರಣೆ ಆಗುತ್ತಿದೆ. ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ನೇತೃತ್ವದಲ್ಲಿ 57 ಸಂತ್ರಸ್ತರಿಗೆ ಒಟ್ಟು ₹10,47 ಕೋಟಿಗಳಷ್ಟು ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಯಿತು.

1894ರ ಭೂಸ್ವಾಧೀನ ಕಾಯ್ದೆಯ ಸೆಕ್ಷನ್ 28(ಎ) ಅಡಿಯಲ್ಲಿ ಈ ಭೂಸ್ವಾಧೀನ ನಡೆದಿದ್ದು, ಒಟ್ಟು 443 ಪ್ರಕರಣಗಳ ಪೈಕಿ 338 ಪ್ರಕರಣಗಳಿಗೆ ಈಗಾಗಲೇ ಅಂತಿಮ ಆದೇಶ ಹೊರಡಿಸಲಾಗಿದ್ದು, ₹68,38,13,841 ರೂಪಾಯಿಗಳಷ್ಟು ಪರಿಹಾರ ಮೊತ್ತ ನಿಗದಿಯಾಗಿತ್ತು.

ಈ ಸಂಬಂಧಿತ ವರದಿಯನ್ನು ಬೆಂಗಳೂರು ಡಿಫೆನ್ಸ್ ಎಸ್ಟೇಟ್ಸ್ ಆಫೀಸರ್‌ಗೆ ಕಳುಹಿಸಲಾಗಿತ್ತು. ಇದೀಗ ಅವರಿಂದಲೇ RTGS ಮೂಲಕ ಹಣವನ್ನು ಫಲಾನುಭವಿಗಳ ಖಾತೆಗೆ ಆನ್‌ಲೈನ್ ಮೂಲಕ ವರ್ಗಾಯಿಸಲಾಗಿದೆ.

Advertisements
WhatsApp Image 2025 06 21 at 8.57.09 PM

ಈ ಹೋರಾಟದಲ್ಲಿ ಹಲವು ಭೂದಾತರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದು, ಕೆಲವರು ಮೃತರಾಗಿದ್ದಾರೆ. ಹಲವರು ಈಗ ವೃದ್ಧರಾಗಿ, ಅನಾರೋಗ್ಯದೊಂದಿಗೆ ಬದುಕು ಸಾಗಿಸುತ್ತಿದ್ದಾರೆ.

“ಭೂಸ್ವಾಧೀನವಾದ ಮೇಲೆ ಜನರು ನ್ಯಾಯಕ್ಕಾಗಿ ದೀರ್ಘಕಾಲ ಕಾದಿದ್ದಾರೆ. ಈಗಲಾದರೂ ಹಂತ ಹಂತವಾಗಿ ಪರಿಹಾರ ನೀಡುವ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಂಡಿದ್ದೇವೆ” ಎಂದು ಸಚಿವ ಮಂಕಾಳು ವೈದ್ಯ ಹೇಳಿದರು.

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಮಾಜಿ ಸದಸ್ಯನ ಕೊಲೆ ಪ್ರಕರಣ: ಐವರು ಪೊಲೀಸರ ಅಮಾನತು

ಇನ್ನೂ ₹58 ಕೋಟಿ ರೂಪಾಯಿಗಳಷ್ಟು ಪರಿಹಾರ ಹಣ ಬಾಕಿ ಉಳಿದಿದ್ದು, ಸರ್ಕಾರದಿಂದ ಸಮರ್ಪಕ ಪಾವತಿಗಾಗಿ ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಪರಿಹಾರ ವಿತರಣೆಯಿಂದ ಏಕ ಕಾಲದಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ಧನ ಸಹಾಯ ದೊರೆತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಬಾಕಿ ಉಳಿದವರಿಗೂ ಶೀಘ್ರ ಪರಿಹಾರ ದೊರಕುವ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X