ಬೆಂಗಳೂರು | ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದ 38 ವರ್ಷದ ಮಹಿಳೆ : ಬಂಧನ

Date:

Advertisements

ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಅಸ್ಸಾಂ ಮೂಲದವರು ಎಂದು ತಿಳಿದುಬಂದಿದೆ.

ಜುಂಟಿ ಎಂಬ ಮಹಿಳೆ ತನ್ನ ಪತಿಯನ್ನು ತೊರೆದು 17 ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು. ಡೇ ಕೇರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಎರಡು ವರ್ಷಗಳ ಹಿಂದೆ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜೋಗೇಶ್ ಎಂಬಾತನ ಸಂಪರ್ಕಕ್ಕೆ ಜುಂಟಿ ಬಂದಿದ್ದು, ಅವರಿಬ್ಬರ ನಡುವೆ ಸಂಬಂಧವಿತ್ತು. ಆದರೂ, ಜೋಗೇಶ್ ಜುಂಟಿಯನ್ನು ದೂರ ಮಾಡುತ್ತಿದ್ದರು. ಜುಂಟಿಯ ಕರೆಗಳಿಗೆ ಉತ್ತರಿಸುತ್ತಿರಲಿಲ್ಲ ಎಂದು ವರದಿಯಾಗಿದೆ. ಜೋಗೇಶ್ ಜುಂಟಿಯಿಂದ ಸ್ವಲ್ಪ ಹಣವನ್ನೂ ಪಡೆದಿದ್ದ ಎನ್ನಲಾಗಿದೆ.

Advertisements

“ಜುಲೈ 21 ರಂದು ಜುಂಟಿ ಈಜಿಪುರದಲ್ಲಿರುವ ಜೋಗೇಶ್ ಅವರ ಮನೆಗೆ ತೆರಳಿದ್ದಳು. ಈ ವೇಳೆ, ಇಬ್ಬರೂ ಜಗಳವಾಡಿದ್ದರು. ನಂತರ ಅವಳು ಜೋಗೇಶ್ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಳು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜೋಗೇಶ್‌ನನ್ನು ಆತನ ಸ್ನೇಹಿತ ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೋಗೇಶ್ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯಿಂದ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸದ ಕಾರಣ ಆಕೆಯನ್ನು ದೂರ ಮಾಡುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫ್ಲೋರ್‌ ಕ್ಲೀನರ್‌ ಕುಡಿದು ಅನ್ನನಾಳ ಕಳೆದುಕೊಂಡಿದ್ದ 6 ವರ್ಷದ ಮಗು; ಯಶಸ್ವಿ ಮರುನಿರ್ಮಾಣ

ಸದ್ಯ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X