ಬೀದರ್‌ | ಜಾಗತಿಕ ಮಟ್ಟದಲ್ಲಿ ಕನ್ನಡದ ಅಸ್ಮಿತೆ ದಾಖಲಿಸಿದ ʼಎದೆಯ ಹಣತೆʼ : ಲಕ್ಷ್ಮಿಕಾಂತ ಪಂಚಾಳ

Date:

Advertisements

ಎದೆಯ ಹಣತೆ ಕೃತಿ ಮುಖಾಂತರ ಕನ್ನಡದ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಸಾಹಿತಿ ಬಾನು ಮುಸ್ತಾಕ್ ಅವರಿಗೆ ಸಲ್ಲುತ್ತದೆ ಎಂದು ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ ಸಿ ಪಂಚಾಳ ಅಭಿಪ್ರಾಯಪಟ್ಟರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಬೀದರ್ ನಗರದ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ ಅಂತರಾಷ್ಟ್ರೀಯ ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರ ʼಎದೆಯ ಹಣತೆʼ ಕೃತಿ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ʼಕನ್ನಡದ ಪ್ರಗತಿಪರ ಚಿಂತಕಿ, ಸಾಹಿತಿ ಬಾನು ಮುಸ್ತಾಕ್ ಅವರ ʼಎದೆಯ ಹಣತೆʼ ಕೃತಿಯಲ್ಲಿ ಒಟ್ಟು ಹನ್ನೆರಡು ಕತೆಗಳಿದ್ದು, ಎಲ್ಲ ಕಥೆಗಳಲ್ಲಿ ಜೀವಪರ, ಮಾನವೀಯ ಮೌಲ್ಯಗಳ ಸತ್ವವಿದೆ. ಇದೇ ಕೃತಿಯನ್ನು ಲೇಖಕಿ ದೀಪ ಭಾಸ್ತಿ ಅವರು ಆಂಗ್ಲ ಭಾಷೆಗೆ ʼಹಾರ್ಟ್ ಲ್ಯಾಂಪ್ʼ ಎಂಬ ಹೆಸರಿನಿಂದ ಅನುವಾದಿಸಿದ್ದಾರೆʼ ಎಂದು ಹೇಳಿದರು.

Advertisements

ʼಈ ಕೃತಿಗೆ ಪ್ರಸಕ್ತ ಸಾಲಿನ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಗೌರವಕ್ಕೆ ಪಾತ್ರವಾಗಿದ್ದು, ಇದು ಇಡೀ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಸಂಗತಿ. ಬಾನು ಮುಷ್ತಾಕ್‌ ಅವರು ತಮ್ಮ ಕಥೆಗಳಲ್ಲಿ ಮಹಿಳೆಯರ ಬದುಕು-ಬವಣೆ, ವೈಚಾರಿಕತೆ, ಮಹಿಳಾಪರ ಜಾಗೃತಿ, ಸ್ತ್ರೀ ಸಂವೇದನೆ ಸೇರಿದಂತೆ ಅನೇಕ ಸಂಗತಿಗಳನ್ನು ಅತ್ಯಂತ ಸೂಕ್ಷ್ಮವಾಗಿ ಕಟ್ಟಿಕೊಟ್ಟಿದ್ದಾರೆʼ ಎಂದು ವಿಶ್ಲೇಷಿಸಿದರು.

ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕನ್ನಡ ಸಾಹಿತ್ಯವು ಶ್ರೇಷ್ಠ ಹಾಗೂ ಅನೇಕ ವರ್ಷಗಳ ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ಕನ್ನಡದ ಸಣ್ಣ ಕಥೆಗಳಿಗೆ ಹೆಚ್ಚು ಓದುಗರಿದ್ದಾರೆ. ಸಣ್ಣ ಕಥೆಗಳು ಜನರ ಮನಸ್ಸಿಗೆ ಬಹು ಬೇಗ ಮುಟ್ಟುತ್ತವೆ. ಬೀದರನಲ್ಲಿ ಕನ್ನಡ ಮಿಶ್ರಿತ ಭಾಷೆ ಹೆಚ್ಚು ಬಳಕೆಯಲ್ಲಿದ್ದು, ಶುದ್ಧ ಭಾಷೆ ಬಳಕೆಗೆ ತರುವುದು ಅವಶ್ಯಕತೆಯಿದೆʼ ಎಂದು ನುಡಿದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಮಾತನಾಡಿ, ʼಬೀದರ ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ, ಸೂಕ್ತ ವೇದಿಕೆ ದೊರೆತರೆ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯುವ ಸಾಮರ್ಥ್ಯ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಹೊಸ ಬರಹಗಾರ, ಸಾಹಿತಿ, ಕಲಾವಿದರಿಗೆ ಸೂಕ್ತ ವೇದಿಕೆ ಒದಗಿಸುವ ಕಾರ್ಯಕ್ರಮಗಳು ಏರ್ಪಡಿಸಲಾಗುವುದುʼ ಎಂದು ತಿಳಿಸಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕಿ ಡಾ. ಮಕ್ತುಂಬಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ʼಕನ್ನಡ ಸಾಹಿತ್ಯಿಕ ಕಾರ್ಯಕ್ರಮ ಯಶಸ್ವಿಗೆ ಕನ್ನಡ ಮನಸ್ಸುಗಳು ಜಾಗೃತರಾಗಬೇಕು. ಗಡಿ ಭಾಗದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಉಪನ್ಯಾಸ ಸೇರಿದಂತೆ ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆʼ ಎಂದು ತಿಳಿಸಿದರು.

ಕಲಾವಿದರಾದ ಶಂಭುಲಿಂಗ ವಾಲ್ದೊಡ್ಡಿ, ಸೃಜನ್ಯ ಅತಿವಾಳೆ, ವೇದಿಕಾ ಚಿಲ್ಲರ್ಗಿ ಗಾಯನ ನಡೆಸಿಕೊಟ್ಟರು.

ಇದನ್ನೂ ಓದಿ : ಬೀದರ್‌ | ಐದು ಕಳವು ಪ್ರಕರಣ : ಐವರ ಬಂಧನ, ₹5.95 ಲಕ್ಷ ಮೌಲ್ಯದ 14 ಬೈಕ್‌ ಜಪ್ತಿ

ಕಾರ್ಯಕ್ರಮದಲ್ಲಿ ಪ್ರಮುಖರಾದ ಸಂತೋಷ ಜೋಳದಾಪಕೆ, ಜಗದೀಶ್ವರ ಬಿರಾದರ್‌, ನಿಜಾಮೋದ್ದೀನ್‌, ಓಂಕಾರ ಪಾಟೀಲ್‌, ಜಗದೇವಿ ಯದಲಾಪುರೆ, ಅವಿನಾಶ ಸೋನೆ, ಬಾಲಾಜಿ ಕುಂಬಾರ, ಅಶ್ವಜೀತ್‌ ದಂಡೀನ್ ಸೇರಿದಂತೆ ಸಾಹಿತಿಗಳು, ಕಲಾವಿದರು ಪಾಲ್ಗೊಂಡಿದ್ದರು. ದೀಲಿಪಕುಮಾರ ಮೊಘ ನಿರೂಪಿಸಿದರು. ಉಮಕಾಂತ ಮೀಸೆ ಸ್ವಾಗತಿಸಿದರು ಬಸವರಾಜ ಮೂಲಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X