ED ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತಿದೆ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್‌ ಆರೋಪ

Date:

Advertisements

ಇ.ಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವೆ ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ಇಡಿ ಅವರ ಪ್ರಶ್ನೆಗಳು ಯಾವ ಹಾದಿಯಲ್ಲಿವೆ, ವಿಚಾರಣೆಗೂ ಪ್ರಕರಣಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬುದು ನೋಡಿದ ಮೇಲೆ ರಾಜಕೀಯ ಷಡ್ಯಂತ್ರವೋ ಇಲ್ಲವೋ ಎಂದು ಹೇಳುತ್ತೇನೆ” ಎಂದರು.

“ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳು ಇಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ. ಏನು ಮಾಡುತ್ತಾರೆ ಎಂದು ನೋಡೋಣ” ಎಂದು ಹೇಳಿದರು.

Advertisements

ಐಶ್ವರ್ಯ ಗೌಡ ನಿಮ್ಮ ಹೆಸರು ಹೇಳಿಕೊಂಡು ವಂಚನೆ ಮಾಡಿದ್ದಾರೆಯೇ, ನಿಮ್ಮ ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯೇ ಎಂದಾಗ, “ಆ ಮಹಿಳೆ ಹಾಗೂ ನಮ್ಮ ನಡುವೆ ಯಾವುದೇ ಹಣಕಾಸು ಹಾಗೂ ಇತರೇ ವಹಿವಾಟು ನಡೆದಿಲ್ಲ. ಅವರು ಮೂರ್ನಾಲ್ಕು ಬಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕೆಲವೊಂದು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ವಾಸ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಅವರ ಆಯೋಜನೆಯ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ನಟರೊಬ್ಬರು ನಿಮ್ಮ ದನಿ ಅನುಕರಣೆ ಮಾಡಿ ವಂಚನೆ ಎಸಗಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆಯ ಬೆಳವಣಿಗೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X