ಕಲಬುರಗಿ | ಹಾಲಿನ ಬೆಲೆ ಏರಿಕೆ; ಬಾಲರಾಜ್ ಗುತ್ತೇದಾರ ಕಿಡಿ

Date:

Advertisements

ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸೇಡಂನ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ವಿದ್ಯುತ್‌ ಬೆಲೆ ಏರಿಕೆಯಾದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂ. ಹೆಚ್ಚಿಸಿದೆ. ಆ ಮೂಲಕ ಶ್ರಮಜೀವಿಗಳ ಕಿಸೆಗೆ ಕನ್ನ ಹಾಕಿದೆ. ಗ್ಯಾರಂಟಿಗಳನ್ನು ಘೋಷಿಸಿದ ಸರ್ಕಾರ, ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿ ಬಡಿದುಕೊಂಡಿತ್ತು. ಆದರೆ, ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ವಿದ್ಯುತ್‌ ದರ ಏರಿಕೆಯಿಂದ ವಸೂಲಿ ಮಾಡಲು ಆರಂಭಿಸಿದೆ” ಎಂದು ಟೀಕಿಸಿದ್ದಾರೆ.

Advertisements

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ. ಜಾನುವಾರುಗಳು ಪಶು ಆಹಾರ ಬೆಲೆ ಇಳಿಕೆಗೆ ಯಾವ ಗ್ಯಾರಂಟಿಯೂ ಇಲ್ಲ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X