ರಾಜ್ಯಾದ್ಯಂತ ಭಾರೀ ಮಳೆ: ಅವಧಿಗೂ ಮುನ್ನ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ

Date:

Advertisements

ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಮುಂಗಾರಿಗೂ ಮೊದಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಜತೆಗೆ ಜೂನ್‌ 26 ರವರೆಗೆ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯಾದ್ಯಂತ ಮಳೆ ಮತ್ತು ಬಿರುಗಾಳಿ ಮುಂದುವರಿಯುವ ಮುನ್ಸೂಚನೆಯನ್ನು ಕೂಡ ಐಎಂಡಿ ನೀಡಿದೆ. ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಭಾರೀ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದೆ.

ಭಾರೀ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್‌ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಭದ್ರಾ ಜಲಾಶಯ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ, ಜಲಾಶಯಕ್ಕೆ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬುದನ್ನು ಗಮನಿಸಬಹುದು.

Advertisements

ಈ ಬಾರಿಯ ಉತ್ತಮ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕೆ‌ಆರ್‌ಎಸ್ ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿದೆ. ಕೆ‌ಆರ್‌ಎಸ್ ಜಲಾಶಯ ಈಗಾಗಲೇ ಭರ್ತಿಯ ಅಂಚಿಗೆ ತಲುಪಿದ್ದು, ಈ ವರ್ಷ ಕೆ‌ಆರ್‌ಎಸ್ ಜಲಾಶಯ ಜುಲೈ ತಿಂಗಳಿನಲ್ಲೇ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 38.04 ಮೀ.ನಷ್ಟಿದ್ದು, ಒಟ್ಟು ಸಾಮರ್ಥ್ಯ 49.45ರಷ್ಟಿದೆ. ಇಂದಿನ ವರ್ಷ ನೀರಿನ ಮಟ್ಟ 14.56 ಟಿಎಂಸಿಯಷ್ಟಿದ್ದು, ಕಳೆದ ವರ್ಷದ 10.14 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದೀಗ 1413 ಕ್ಯೂಸೆಕ್‌ನಷ್ಟು ಒಳಹರಿವು ಇದ್ದು, 798 ಕ್ಯೂಸೆಕ್‌ ಹೊರಹರಿವು ಇದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕೊರತೆಗಳ ಮೆಟ್ಟಿ ನಿಂತ ಸರ್ಕಾರಿ ಶಾಲೆ; ಸತತ 8 ವರ್ಷಗಳಿಂದ ಶೇ.100ರಷ್ಟು ಫಲಿತಾಂಶ

ಆಲಮಟ್ಟಿ ಜಲಾಶಯ ಗರಿಷ್ಟ ನೀರಿನ ಮಟ್ಟ 519.60 ಮೀ.ನಷ್ಟಿದ್ದು, ಒಟ್ಟು ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 29.42 ಟಿಎಂಸಿಯಷ್ಟಿದ್ದು, ಕಳೆದ ವರ್ಷ 19.92 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದೀಗ 3,715 ಕ್ಯೂಸೆಕ್‌ನಷ್ಟು ಒಳಹರಿವು ಇದ್ದು, 430 ಕ್ಯೂಸೆಕ್‌ನಷ್ಟು ಹೊರಹರಿವು ಇದೆ.

ಅಂತೆಯೇ ಉಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ಕೋಷ್ಟಕದಲ್ಲಿ ಕಾಣಬಹುದು.

ಕರ್ನಾಟಕದ ಪ್ರಮುಖ ಜಲಾಶಯಗಳು (Dam)ಗರಿಷ್ಠ ನೀರಿನ ಮಟ್ಟ (ಮೀ)ಒಟ್ಟು ಸಾಮರ್ಥ್ಯ (ಟಿಎಂಸಿ)ಇಂದಿನ ನೀರಿನ ಮಟ್ಟ (ಟಿಎಂಸಿ)ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ)ಒಳಹರಿವು (ಕ್ಯೂಸೆಕ್ಸ್)ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam)519.60123.0829.4219.923715430
ತುಂಗಭದ್ರಾ ಜಲಾಶಯ (Tungabhadra Dam)497.71105.795.574.216382026
ಮಲಪ್ರಭಾ ಜಲಾಶಯ (Malaprabha Dam)633.8037.736.437.160194
ಕೆ.ಆರ್.ಎಸ್ (KRS Dam)38.0449.4514.5610.141413798
ಲಿಂಗನಮಕ್ಕಿ ಜಲಾಶಯ (Linganamakki Dam)554.44151.7513.9711.3024971686
ಕಬಿನಿ ಜಲಾಶಯ (Kabini Dam)696.1319.529.014.30910408
ಭದ್ರಾ ಜಲಾಶಯ (Bhadra Dam)657.7371.5415.2224.97875343
ಘಟಪ್ರಭಾ ಜಲಾಶಯ (Ghataprabha Dam)662.9151.007.954.12545119
ಹೇಮಾವತಿ ಜಲಾಶಯ (Hemavathi Dam)890.5837.1010.8214.611376250
ವರಾಹಿ ಜಲಾಶಯ (Varahi Dam)594.3631.103.062.334570
ಹಾರಂಗಿ ಜಲಾಶಯ (Harangi Dam)​​871.388.503.282.59289200
ಸೂಫಾ (Supa Dam)564.00145.3330.4232.6441712054
ನಾರಾಯಣಪುರ ಜಲಾಶಯ (Narayanpura Dam)492.2515.8721.1614.78235235
ವಾಣಿವಿಲಾಸ ಸಾಗರ (VaniVilas Sagar Dam)652.2430.4218.2325.060147

ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಲುನಲ್ಲಿ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 95 ಮಿಮೀ ಮಳೆಯಾಗಿದೆ. ಜೂನ್ 22ರಿಂದ ಜೂನ್ 30ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಚದುರಿದ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿಂದೆ ಕೆಆರ್‌ಎಸ್‌ ಜಲಾಶದ ಬಳಿ ‘ಟ್ರಯಲ್ ಬ್ಲಾಸ್ಟ್’ ನಡೆಸಲು ಮುಂದಾಗಿದ್ದನ್ನು ರೈತರು ಹೋರಾಟದ ಮೂಲಕ ತಡೆದಿದ್ದರು. ಈಗ ಅಮ್ಯೂಸ್‌ಮೆಂಟ್ ಪಾರ್ಕ್‌ಗಾಗಿ ಆಳವಾದ ದೊಡ್ಡ ಗುಂಡಿಗಳನ್ನು ತೋಡಲು ಮುಂದಾಗಿದ್ದಾರೆ. ಅಲ್ಲದೆ ಈಗಾಗಲೇ ಕೆಆರ್‌ಎಸ್‌ ಜಲಾಶಯ ಅವಧಿಗು ಮುನ್ನವೇ ಭರ್ತಿಯಾಗಿದೆ. ಇದೀಗ ಅಣೆಕಟ್ಟು ಪ್ರದೇಶದಲ್ಲಿ ಕಾಮಗಾರಿಗಳು ನಡೆದು ಶಿಲಾ ಪದರದ ಮೇಲೆ ನಿಂತಿರುವ ಕೆಆರ್‌ಎಸ್ ಅಣೆಕಟ್ಟೆ ಕಂಪಿಸಿದರೆ ಅನಾಹುತಕ್ಕೆ ಕಾರಣವಾಗಬಹುದು ಎಂಬುದು ಸ್ಥಳೀಯ ರೈತರ ಆತಂಕಕ್ಕೂ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇನ್ನು ಎಲ್ಲಿದ್ದೀರಾ ನೀವು krs ಅಲ್ರೇಡಿ 43 ಟಿಎಂಸಿ ನೀರು ತುಂಬಿದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X