ಪರಿಶಿಷ್ಟ ಜಾತಿ ಒಳ ಮೀಸಲಾತಿ | ಸಮೀಕ್ಷೆ ಅವಧಿ ಒಂದು ವಾರ ವಿಸ್ತರಣೆ

Date:

Advertisements

ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.

ಮೇ 5ರಿಂದ ಮನೆ ಮನೆ ಭೇಟಿ ಮೂಲಕ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇಕಡ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಜೂನ್ 23ರಿಂದ 30ರವರೆಗೆ ವಿಸ್ತರಿಸಲಾಗಿದೆ.

ಬಿಬಿಎಂಪಿಯ ವ್ಯಾಪ್ತಿಯಲ್ಲಿ ಅಂದಾಜು 13.62 ಲಕ್ಷ ಪರಿಶಿಷ್ಟ ಜಾತಿ ಸಮುದಾಯ ಇರಬಹುದೆಂದು ಅಂದಾಜಿಸಲಾಗಿದೆ. ಆದರೆ, ಈವರೆಗೂ ಕೇವಲ 6.70 ಲಕ್ಷ ಜನರ ಮಾಹಿತಿ ಮಾತ್ರ ಲಭ್ಯವಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2.50 ಲಕ್ಷ ಜನ ಇರಬಹುದೆಂದು ಅಂದಾಜಿಸಿತ್ತು. ಆದರೆ, 2.25 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಕೋಲಾರದಲ್ಲಿ ಅಂದಾಜು 4.93 ಲಕ್ಷ ಜನರ ಪೈಕಿ 4.60 ಲಕ್ಷ ಜನ ಸಮೀಕ್ಷೆಯಲ್ಲಿ ದಾಖಲಾಗಿದ್ದಾರೆ.

Advertisements

ಆನ್‌ಲೈನ್‌ ಮೂಲಕ ಕುಟುಂಬದ ಸದಸ್ಯರ ವಿವರಗಳನ್ನು ದಾಖಲಿಸುವ ಸೌಲಭ್ಯವನ್ನು ಬಳಸಿಕೊಂಡು ಸುಮಾರು ಆರು ಸಾವಿರ ಕುಟುಂಬಗಳು ಸಮೀಕ್ಷೆಯಲ್ಲಿ ಭಾಗಿಯಾಗಿವೆ. ಸುಮಾರು 25 ಸಾವಿರ ಜನರ ವಿವರಗಳು ದಾಖಲಾಗಿವೆ ಎನ್ನಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯೊಳಗಿನ ಸಮೀಕ್ಷಾ ಕಾರ್ಯ ಶೇ.100ರಷ್ಟು ಖಚಿತಪಡಿಸಲು ಸಮೀಕ್ಷೆ ನಡೆಸಿದ ಪ್ರತೀ ಮನೆಗೆ ಸ್ಟಿಕ್ಕರ್‌ಗಳನ್ನು ಅಂಟಿಸಲು ಪ್ರಾರಂಭಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಅಧಿಕಾರಿಗಳಿಗೆ ಭಾನುವಾರ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X