ಮೇಘಾಲಯದ ಮುಖ್ಯಮಂತ್ರಿ ಕಚೇರಿ ಮೇಲೆ ಗುಂಪು ದಾಳಿ; ಭದ್ರತಾ ಸಿಬ್ಬಂದಿಗೆ ಗಾಯ

Date:

Advertisements

ಅಪರಿಚಿತ ದುಷ್ಕರ್ಮಿಗಳ ಗುಂಪು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಕಚೇರಿಯ ಮೇಲೆ ದಾಳಿ ನಡೆಸಿರುವ ಘಟನೆ ಪಶ್ಚಿಮ ಮೇಘಾಲಯದ ತುರ ಪಟ್ಟಣದಲ್ಲಿ ನಡೆದಿದೆ.

ಕಚೇರಿಯ ಹೊರಗೆ ನೆರೆದಿದ್ದ ಉದ್ರಿಕ್ತರ ಗುಂಪು ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿತು. ಕೆಲವರು ಒಳಗೆ ನುಗ್ಗಲೂ ಯತ್ನಿಸಿದರು. ಕೊನೆಗೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರಿಗೆ ಯಾವುದೇ ಪೆಟ್ಟಾಗಿಲ್ಲ. ಆದರೆ, ಐವರು ಪೊಲೀಸರು ಕಲ್ಲು ತೂರಾಟದಿಂದ ಗಾಯಗೊಂಡಿದ್ದಾರೆ. ನೂರಕ್ಕೂ ಅಧಿಕ ಸಂಖ್ಯೆಯ ಪ್ರತಿಭಟನಾಕಾರರು ಕಚೇರಿಯನ್ನು ಸುತ್ತುವರೆದಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಪಟ್ಟಣದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.        

Advertisements

ತುರ ಪಟ್ಟಣವನ್ನು ಚಳಿಗಾಲದ ರಾಜಧಾನಿ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ವಿವಿಧೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಕಲ್ಲು ತೂರಾಟ ಮಾಡಿದವರು ಪ್ರತಿಭಟನಾನಿರತರಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಗ್ಮಾ ಅವರು ಗರೋ ಹಿಲ್ಸ್ ರಾಜ್ಯ ಜನಾಂದೋಲನ ಸಮಿತಿ, ಎಸಿಎಚ್‌ಐಕೆ ಸಂಘಟನೆಗಳ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾಗ ದಾಂಧಲೆ ಘಟನೆ ನಡೆದಿದೆ. ತುರ ಪಟ್ಟಣವನ್ನು ಮೇಘಾಲಯದ ಚಳಿಗಾಲದ ರಾಜಧಾನಿ ಮಾಡಬೇಕು ಎಂದು ಮಾತುಕತೆಗೆ ಬಂದಿದ್ದ ಗುಂಪು ಒತ್ತಾಯಿಸಿತ್ತು.

ಈ ಸುದ್ದಿ ಓದಿದ್ದೀರಾ: ಆರು ಮಂದಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಜೀವ ಬೆದರಿಕೆ; ₹50 ಲಕ್ಷಕ್ಕೆ ಡಿಮಾಂಡ್     

‘ಮಾತುಕತೆ ಅಂತ್ಯವಾಗುವ ಹೊತ್ತಿನಲ್ಲಿ ಹೊರಗೆ ಗದ್ದಲ ಕೇಳಿಸಿತು. ನಾನು ಹೊರಗೆ ಬಂದು ಯಾವುದೇ ಅಹಿತಕರ ಘಟನೆಗೆ ಕಾರಣವಾಗದಂತೆ ಅವರಿಗೆ ಹೇಳಿದೆ. ಸರ್ಕಾರೇತರ ಸಂಸ್ಥೆಗಳ, ಸಂಘಟನೆಗಳ ಮುಖಂಡರೂ ಹೊರಗೆ ಬಂದು ಉದ್ರಿಕ್ತ ಗುಂಪಿನ ಜೊತೆ ಮಾತನಾಡಿದರು. ಆ ಗುಂಪಿನವರು ಯಾರು ಎನ್ನುವುದೇ ತಮಗೆ ತಿಳಿದಿಲ್ಲ ಎಂದು ಸಂಘಟನೆಗಳ ಮುಖಂಡರು ತಿಳಿಸಿದರು. ಆ ಗುಂಪು ತೊಂದರೆ ಉಂಟು ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಬಂದಂತಿತ್ತು’ ಎಂದು ಮುಖ್ಯಮಂತ್ರಿಗಳು ವಿಡಿಯೋ ಹೇಳಿಕೆ ನೀಡಿದ್ದಾರೆ.

ಕಲ್ಲು ತೂರಾಟದಿಂದ ತೀವ್ರವಾಗಿ ಗಾಯಗೊಂಡಿರುವ ಐವರು ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿದೆ. ಜೊತೆಗೆ ಅವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನೂ ಘೋಷಿಸಿದೆ.    

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X