ಓವರ್‌ಟೇಕ್‌ ಮಾಡಿದ ವ್ಯಕ್ತಿಗೆ ಅನಂತ್‌ ಕುಮಾರ್‌ ಹೆಗಡೆ ಪುತ್ರನಿಂದ ಹಲ್ಲೆ; ಕಾರಿನಲ್ಲಿದ್ದ ಮಾಜಿ ಸಂಸದ

Date:

Advertisements

ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಮಾಜಿ ಸಂಸದ ಅನಂತ್​ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

Advertisements

ಈ ವೇಳೆ, ಅನಂತ್ ಕುಮಾರ್ ಹೆಗಡೆ ಅವರು ಇದ್ದ ಕಾರನ್ನು ಮತ್ತೊಂದು ಕಾರು ಓವರ್​​ಟೇಕ್​ ಮಾಡಿದೆ. ಓವರ್‌ಟೇಕ್‌ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಮತ್ತು ಅನಂತ್ ಕುಮಾರ್ ಹೆಗಡೆ ಅವರ ಪುತ್ರ ಆಶುತೋಷ್ ಮತ್ತೊಂದು ಕಾರಿನಲ್ಲಿದ್ದ ಸಲ್ಮಾನ್, ಸೈಪ್, ಇಲಿಯಾಜ್ ಖಾನ್, ಗುಲಷಿರ್ ಉನ್ನಿಸಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಗಾಯಗೊಂಡವರನ್ನು ದಾಬಸ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ಅನಂತ್‌ ಕುಮಾರ್‌ ಹೆಗಡೆ, ಚಾಲಕ ಮತ್ತು ಗನ್​ಮ್ಯಾನ್​ನನ್ನು ಡಿವೈಎಸ್ಪಿ ಜಗದೀಶ್ ವಿಚಾರಣೆ ನಡೆಸಿದ್ದಾರೆ.

ಘಟನೆ ಸಂಬಂಧ ದಾಬಸ್ ಪೇಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X