ಮೈಸೂರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಏಳು ದಶಕ ಪೂರೈಸಿದ ಸಂಭ್ರಮ

Date:

Advertisements

ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥಾಪನೆಗೊಂಡು ಏಳು ದಶಕ ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ಜೂ.23 ರಿಂದ 26 ರ ವರೆಗೆ ಬೃಹತ್ ರಕ್ತದಾನ ಶಿಬಿರವನ್ನು ಮೈಸೂರು ಆಡಳಿತ ಕಚೇರಿ ವಲಯದಲ್ಲಿ ಆರಂಭಿಸಿದೆ ಎಂದು ಬ್ಯಾಂಕ್ ವೈದ್ಯಾಧಿಕಾರಿ ಡಾ. ವೀಣಾ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಇದಿಷ್ಟು ದಿನ ನಿತ್ಯ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಜಯಲಕ್ಷ್ಮಿಪುರಂ ಎಸ್‌ಬಿಐ ತರಬೇತಿ ಕೇಂದ್ರ ಹಾಗೂ ವರ್ತುಲ ರಸ್ತೆಯ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ದಾನಿಗಳು ತಮಗೆ ಅನುಕೂಲ ಆದ ಕಡೆಗಳಲ್ಲಿ ರಕ್ತ ನೀಡಬಹುದಾಗಿದೆ ಎಂದರು.

ಇದು ದೇಶದಾದ್ಯಂತ ಬ್ಯಾಂಕ್ ನಡೆಸುತ್ತಿರುವ ರಕ್ತದಾನ ಶಿಬಿರವಾಗಿದೆ. ಇದರ ಅಂಗವಾಗಿ ಮೈಸೂರು ಆಡಳಿತ ಕಚೇರಿ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರಗಳಲ್ಲಿಯೂ ನಡೆಯುತ್ತಿದೆ. ಅಗತ್ಯ ಸಂದರ್ಭದಲ್ಲಿ ರಕ್ತ ದೊರೆಯುವುದು ಕಷ್ಟ. ಹೀಗಾಗಿ, ಜನಪರ ಸೇವೆ ನಿಟ್ಟಿನಲ್ಲಿ ರಕ್ತದಾನ ಶಿಬಿರವನ್ನು ಈ ಸಂದರ್ಭದಲ್ಲಿ ಬ್ಯಾಂಕ್ ಹಮ್ಮಿಕೊಂಡಿದೆ. ರಕ್ತ ನೀಡುವವರಿಗೆ ಪ್ರಮಾಣಪತ್ರ, ₹500 ರೂಪಾಯಿಗಳ ಗಿಫ್ಟ್ ವೋಚರ್ ನೀಡಲಾಗುವುದೆಂದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ನಟನ ರಂಗಶಾಲೆಯಲ್ಲಿ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘

ಬ್ಯಾಂಕ್ ಅಧಿಕಾರಿಗಳಾದ ಪ್ರವೀಣ್, ಎಚ್‌ಆರ್‌ಒ ಕಲ್ಯಾಣ್‌ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X