ಗದಗ | ತಹಶೀಲ್ದಾರ್ ಕಛೇರಿ ಸ್ಥಳಾಂತರ ಖಂಡಿಸಿ ಪ್ರತಿಭಟನೆ

Date:

Advertisements

ತಹಶೀಲ್ದಾ‌ರ್ ಕಛೇರಿಯನ್ನು ಎಪಿಎಂಸಿ ಆವರಣದಲ್ಲಿರುವ ಟೆಂಡರ್‌ ಹಾಲ್‌ಗೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಹಾಗೂ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾ‌ರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಮಂಜುನಾಥ್ ಬುರಡಿ ಮಾತನಾಡಿ, “ನಾವು ಸ್ಥಳಾಂತರ ಮಾಡಬೇಕಾಗಿರುವದು ತಾಲ್ಲೂಕು ಪಂಚಾಯಿತಿ ಹೊರತು ತಹಶೀಲ್ದಾ‌ರ್ ಕಚೇರಿಯಲ್ಲ. ಸರ್ಕಾರಿ ಕೆಲಸ ಸಾರ್ವಜನಿಕ ಕೆಲಸ. ತಹಶೀಲ್ದಾ‌ರ್ ಕಚೇರಿ ಇದ್ದ ಸ್ಥಳದಲ್ಲೇ ಇರಬೇಕು. ಜಿಲ್ಲಾಧಿಕಾರಿಗಳು ಕೂಡಲೇ ತಮ್ಮ ಆದೇಶವನ್ನು ಮರಳಿ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಉಗ್ರ ಹೋರಾಟ ಮಾಡಲಾಗುವದು” ಎಂದು ಎಚ್ಚರಿಕೆ ನೀಡಿದರು.

“ಈ ಕಚೇರಿಯ ಸ್ಥಳಾಂತರದ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸಾರ್ವಜನಿಕರ ಅನುಕೂಲ ಮರೆತು ಪ್ರಭಾವಿಗಳ ಮಾತು ಕೇಳಿ ಸ್ಥಳಾಂತರಿಸಿದ್ದೆ ಆದರೆ ಮುಂದಿನ ದಿನಮಾನಗಳಲ್ಲಿ ಗ್ರಾಮ ಗ್ರಾಮಗಳಲ್ಲಿ ಈ ವಿಷಯವನ್ನು ತಿಳಿಸಿ ಬೃಹತ್ ಮಾಡಲಾಗುವುದು” ಎಂದರು.

Advertisements

“ಗಜೇಂದ್ರಗಡ ಪಟ್ಟಣ ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು, ಈಗಾಗಲೇ ತಾಲ್ಲೂಕು ಕಚೇರಿಗಳ ಕಟ್ಟಡಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಹೀಗಿರುವಾಗ ತಹಶೀಲ್ದಾ‌ರ್ ಕಚೇರಿಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸುವುದರಿಂದ ಹಲವು ತೊಂದರೆಗಳು ಉಂಟಾಗಲಿವೆ. ಕೂಡಲೇ ಕಚೇರಿ ಸ್ಥಳಾಂತರ ಬಿಡಬೇಕು” ಎಂದು ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕುಕನೂರು | ಮಾನವೀಯ ಮೌಲ್ಯಗಳ ನಾಯಕ ಕೆ ಎಚ್ ಪಾಟೀಲ: ಗೃಹ ಸಚಿವ ಪರಮೇಶ್ವರ್‌

ಈ ಸಂದರ್ಭದಲ್ಲಿ ಶಿವಪ್ಪ ಮುಶಿಗೇರಿ, ಡಿ.ಜಿ. ಕಟ್ಟಿಮನಿ, ಡಿ.ಎಂ. ಸಂದಿಮನಿ, ರವಿ ಮಾದರ, ಯಮನೂರಪ್ಪ ಪುರ್ತಗೇರಿ, ಮಾರುತಿ ಹಾದಿಮನಿ, ಸಣ್ಣಪ್ಪ ಪೂಜಾರ, ಭೀಮಪ್ಪ ಹಿರೇಹಾಳ, ಯಲ್ಲಪ್ಪ ಶಾಂತಗೇರಿ, ರೋಣಪ್ಪ ಚಿಲಝರಿ, ಚನ್ನಪ್ಪ ಪೂಜಾರ, ದುರಗಪ್ಪ ಹಿರೇಮನಿ, ಶಿವು ಭೂಮದ, ಶರಣು ಅರಳಿಗಿಡದ, ಯಮನೂರ ಅಬ್ಬಿಗೇರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X