ಇಸ್ರೇಲ್-ಇರಾನ್ ಸಂಘರ್ಷ | ಮಂಗಳೂರಿನಿಂದ ಹಾರಿದ್ದ 2 ವಿಮಾನಗಳು ವಾಪಸ್; 48 ಫ್ಲೈಟ್‌ಗಳು ರದ್ದು

Date:

Advertisements

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ, ಮಂಗಳೂರಿನಿಂದ ದಮಾಮ್ ಮತ್ತು ಅಬುಧಾಬಿಗೆ ಹೊರಟಿದ್ದ ಎರಡು ವಿಮಾನಗಳು ಭಾರತಕ್ಕೆ ಮರಳಿಬಂದಿವೆ. ಮಂಗಳೂರಿನಿಂದ ದಮಾಮ್‌ಗೆ ಹಾರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಸ್ಕತ್‌ನಲ್ಲಿ ಭೂಸ್ಪರ್ಶ ಮಾಡಿದ್ದರೆ, ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಮುಂಬೈಯಲ್ಲಿ ಇಳಿದಿದೆ. ಮಾತ್ರವಲ್ಲದೆ, ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ 48 ವಿಮಾನಗಳ ಹಾರಾಟವನ್ನು ಕೂಡ ರದ್ದುಗೊಳಿಸಲಾಗಿದೆ.

ಸಂಘರ್ಷ ಉಲ್ಬಣದ ನಡುವೆಯೂ ಮಂಗಳವಾರ ಮುಂಜಾನೆ ಇರಾನ್ ಮೇಲೆ ಅಮೆರಿಕದ ದಾಳಿ ಮಾಡಿತು. ದಾಳಿ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಏಕಪಕ್ಷೀಯವಾಗಿ ಇಸ್ರೇಲ್-ಇರಾನ್ ನಡುವೆ ಮಂಗಳವಾರ ಮುಂಜಾನೆ ಕದನ ವಿರಾಮ ಘೋಷಿಸಿದ್ದರು. ಆದರೆ, ಈ ಬಗ್ಗೆ ತಮ್ಮೊಂದಿಗೆ ಯಾವುದೇ ಮಾತುಕತೆ-ಒಪ್ಪಂದ ಮಾಡಿಕೊಂಡಿಲ್ಲ ಎಂದಿದ್ದ ಇರಾನ್ ಟ್ರಂಪ್ ಘೋಷಿಸಿದ್ದ ಕದನ ವಿರಾಮವನ್ನು ಅಲ್ಲಗಳೆದಿತ್ತು. ಇದೀಗ, ಇಸ್ರೇಲ್ ಮೇಲೆ ದಾಳಿ ನಡೆಸಿರುವ ಇರಾನ್, ‘ಈಗ ಕದನ ವಿರಾಮ ಜಾರಿಯಾಗಿದೆ’ ಎಂದು ಹೇಳಿದೆ.

ಆದಾಗ್ಯೂ, ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳು ತಮ್ಮ ವಾಯು ಪ್ರದೇಶಗಳನ್ನು ಮುಚ್ಚಿವೆ. ಹೀಗಾಗಿ, ಭಾರತದ ರಾಜಧಾನಿ ದೆಹಲಿ ಮತ್ತು ಮಧ್ಯಪ್ರಾಚ್ಯದ ವಿವಿಧ ದೇಶಗಳ ನಡುವೆ ಹಾರಾಟ ನಡೆಸಬೇಕಿದ್ದ ವಿಮಾನಗಳ ರದ್ದಾಗಿವೆ. ಅವುಗಳಲ್ಲಿ, ದೆಹಲಿ ವಿಮಾನ ನಿಲ್ದಾಣಕ್ಕೆ ಮಧ್ಯಪ್ರಾಚ್ಯದಿಂದ ಬರಬೇಕಿದ್ದ 28 ಮತ್ತು ದೆಹಲಿಯಿಂದ ಹೊರಡಬೇಕಿದ್ದ 20 ವಿಮಾನಗಳು ಸೇರಿದಂತೆ ಒಟ್ಟು 48 ವಿಮಾನಗಳು ರದ್ದಾಗಿವೆ.

Advertisements

ಈ ಲೇಖನ ಓದಿದ್ದೀರಾ?: ಇಸ್ರೇಲ್-ಇರಾನ್ ಸಂಘರ್ಷ | ಭಾರತಕ್ಕೆ ಗಂಭೀರ ಸವಾಲುಗಳು, ಪರಿಣಾಮಗಳು

ದೆಹಲಿಗೆ ಬರಬೇಕಿದ್ದು ರದ್ದಾದ ವಿಮಾನಗಳಲ್ಲಿ ಏರ್ ಇಂಡಿಯಾದ 17, ಇಂಡಿಗೋದ 8 ಹಾಗೂ ಇತರ ವಿಮಾನಯಾನ ಸಂಸ್ಥೆಗಳ 3 ವಿಮಾನಳು ಸೇರಿವೆ.

ದೆಹಲಿಯಿಂದ ಹೊರಡಬೇಕಿದ್ದ ವಿಮಾನಗಳಲ್ಲಿ ಏರ್ ಇಂಡಿಯಾದ 10, ಇಂಡಿಗೋದ 7 ಮತ್ತು ಇತರ ವಿಮಾನಯಾನ ಸಂಸ್ಥೆಗಳ 3 ವಿಮಾನಗಳ ಹಾರಾಟ ರದ್ದಾಗಿದೆ.

“ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸುರಕ್ಷಿತ ಮತ್ತು ತಡೆರಹಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಲಭ್ಯವಿರುವ ಸುರಕ್ಷಿತ ವಿಮಾನ ಮಾರ್ಗಗಳಿಗಾಗಿ ಎದುರು ನೋಡುತ್ತಿದ್ದೇವೆ. ದಯವಿಟ್ಟು ನಮ್ಮ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಅಪ್‌ಡೇಟ್‌ಗಳನ್ನು ಪಡೆಯಿರಿ” ಎಂದು ಇಂಡಿಗೋ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X