ಕ್ಯಾನ್ಸರ್‌ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದ ಮೊಮ್ಮಗ

Date:

Advertisements

ಕ್ಯಾನ್ಸರ್‌ ಪೀಡಿತ ಅಜ್ಜಿಯೊಬ್ಬರನ್ನು ಆಕೆಯ ಸ್ವಂತ ಮೊಮ್ಮಗನೇ ಕಸದ ರಾಶಿಗೆ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ.

60 ವರ್ಷದ ಯಶೋಧಾ ಗಾಯಕ್ವಾಡ್ ಅವರು ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆ ಮುಂಬೈನ ಆರ್​ ಕಾಲೋನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ವೃದ್ಧರೊಬ್ಬರು ದುರ್ಬಲ ಸ್ಥಿತಿಯಲ್ಲಿ ಮಲಗಿರುವುದನ್ನು ಸ್ಥಳೀಯರೊಬ್ಬರು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ವೃದ್ಧೆಯ ಕುಟುಂಬದವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಬೆಳಗ್ಗೆ ಮಹಿಳೆ ಪತ್ತೆಯಾಗಿದ್ದರೂ ಸಂಜೆ 5.30ರ ಹೊತ್ತಿಗೆ ಮಾತ್ರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಯಿತು. ಮಹಿಳೆ ತನ್ನ ಕುಟುಂಬ ಸದಸ್ಯರ ಎರಡು ನಿವಾಸಗಳ ವಿಳಾಸವನ್ನು ಹಂಚಿಕೊಂಡಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಸಂಬಂಧಿಕರನ್ನು ಪತ್ತೆಹಚ್ಚಲು ಆಕೆಯ ಚಿತ್ರವನ್ನು ಎಲ್ಲ ಪೊಲೀಸ್ ಠಾಣೆಗಳಲ್ಲಿ ಹಂಚಿಕೊಳ್ಳಲಾಗಿದೆ. ಮೊಮ್ಮಗ ಈ ರೀತಿಯ ಅಮಾನವೀಯ ಕೆಲಸವನ್ನು ಏಕೆ ಮಾಡಿದನೆಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಂಡ್ಯದಲ್ಲೂ ನಡೆದ ಘಟನೆ

ಮಂಡ್ಯದಲ್ಲೂ ಕೂಡ ಇದೇ ರೀತಿಯಾದ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ.

ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ವೃದ್ಧೆಯನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X