ದಾವಣಗೆರೆ | ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು: ಎಐಡಿಎಸ್ಒ ಪೂಜಾ ನಂದಿಹಳ್ಳಿ

Date:

Advertisements

ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು. ಕಡಿಮೆ ದಾಖಲಾತಿ ಹೊಂದಿರುವ ದ್ಯಾಮೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ವಿಲೀನಗೊಳಿಸಲು ಬಿಡುವುದಿಲ್ಲ ಎಂದು ಆಗ್ರಹಿಸಿ ಎಐಡಿಎಸ್ಒ ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಗ್ರಾಮಸ್ಥರು ಸೇರಿ ದ್ಯಾಮೇನಹಳ್ಳಿ ಸರ್ಕಾರಿ ಶಾಲೆ ಎದುರು ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿ, “ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಈ ಶಾಲೆಗೆ ಹೊಸ ಕಟ್ಟಡವನ್ನು ನಿರ್ಮಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಶಾಲೆಯ ಆವರಣದಲ್ಲಿ ನಾಲ್ಕು ಕಟ್ಟಡಗಳಿದ್ದು, ಒಂದು ಕಟ್ಟಡ ಸಂಪೂರ್ಣ ಪಾಳು ಬಿದ್ದಿದೆ. ಅದರ ಪಕ್ಕದ ಇನ್ನೊಂದು ಕಟ್ಟಡ ಮಳೆ ಬಂದರೆ ಸೋರುತ್ತದೆ. ಮುಖ್ಯ ಕಟ್ಟಡ ಸೋರುವ ಕಾರಣ ಇತ್ತೀಚಿಗಷ್ಟೇ ಆರ್‌ಸಿಸಿ ಮೇಲೆ ಶೀಟ್‌ ಹಾಕಿಸಲಾಗಿದೆ” ಎಂದರು.

“ಪಾಳು ಬಿದ್ದ ಕಟ್ಟಡವನ್ನು ಕೆಡವಿಸಿ, ಕಳೆಯಿಂದ ಕೂಡಿದ ಆಟದ ಮೈದಾನವನ್ನು ಸ್ವಚ್ಛಂದಗೊಳಿಸಬೇಕು. ಬಹುತೇಕ ಬಡ ವಿದ್ಯಾರ್ಥಿಗಳು ಓದುವ ಸರ್ಕಾರಿ ಶಾಲೆಗಳನ್ನು ಬಲಗೊಳಿಸಬೇಕು. ನಿಜವಾಗಲೂ ಈ ಜನನಾಯಕರಿಗೆ ಸರ್ಕಾರಿ ಶಾಲೆ ಬೆಳೆಸುವ ಜವಾಬ್ದಾರಿ ಇದೆಯೆ ಎಂಬ ಪ್ರಶ್ನೆ ಜನಗಳಲ್ಲಿ ಮೂಡುತ್ತಿದೆ. ಉನ್ನತ ಭವಿಷ್ಯ ರೂಪಿಸುವ ಕನಸು ಹೊತ್ತ ದೊಡ್ಡ ಸಂಖ್ಯೆಯ ಬಡವರು, ರೈತರು, ಕೂಲಿಕಾರರು ಕೂಡ ಸಾಲ ಮಾಡಿ ಖಾಸಗಿ ಶಾಲೆಗೆ ಸೇರಿಸುವ ಪರಿಸ್ಥಿತಿ ಎದುರಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

Advertisements
ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆ ಉಳಿವಿಗೆ ಸಹಿ ಸಂಗ್ರಹ 1

ಇದನ್ನೂ ಓದಿದ್ದೀರಾ? ಉಡುಪಿ | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ; ಚೆನ್ನೈ ಮೂಲದ ಎಂಜಿನಿಯರ್ ಯುವತಿ ಬಂಧನ

“ಜನಗಳ ತೆರಿಗೆ ಮೇಲೆ ನಡೆಯುತ್ತಿರುವ ಸರ್ಕಾರವು ಶಿಕ್ಷಣಕ್ಕೆ ರಾಜ್ಯದಲ್ಲಿ 30 ಪರ್ಸೆಂಟ್ ಅನುದಾನವನ್ನು ಮೀಸಲಿಡಬೇಕಿತ್ತು. ಆದರೆ ದುರಂತವೆಂದರೆ ಶಿಕ್ಷಣ ಕಟ್ಟಕಡೆಯ ಆದ್ಯತೆಯಾಗಿದೆ. ಭಾರತದ ನವೋದಯ ಚಿಂತಕರು ರಾಜಾರಾಮ್ ಮೋಹನ್ ರಾಯ್, ಸಾವಿತ್ರಿ ಬಾಫುಲೆ, ಜ್ಯೋತಿ ರಾವ್ ಬಾಫುಲೆ,‌ ಈಶ್ವರ ಚಂದ್ರ ವಿದ್ಯಾ ಸಾಗರ್, ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್ ಮುಂತಾದವರು ಇಂತಹ ಭಾರತಕ್ಕಾಗಿ ಕನಸು ಕಂಡರೆ? ಈ ಅಸಮಾನತೆಯ ಭಾರತಕ್ಕಾಗಿ ಹೋರಾಡಿ, ತ್ಯಾಗ-ಬಲಿದಾನವನ್ನು ಮಾಡಿದರೆ? ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ, ಇನ್ನೂ ಬಲಿಷ್ಠ ಹೋರಾಟಗಳನ್ನು ಬೆಳೆಸೋಣ” ಎಂದು ಗ್ರಾಮಸ್ಥರಿಗೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಸಹೋದರ ಸಂಘಟನೆಯಾದ ಎಐಕೆಕೆಎಂಎಸ್‌ನ ಜಿಲ್ಲಾಧ್ಯಕ್ಷ ಮಧು ತೊಗಲೇರಿ, ಎಐಡಿಎಸ್ಓ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್, ದ್ಯಾಮೇನಹಳ್ಳಿಯ ರೈತ ಮುಖಂಡರು, ಪೋಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X