ವಂದೇ ಭಾರತ್ | ಕಿಟಕಿ ಸೀಟಿಗಾಗಿ ಗಲಾಟೆ; ಪ್ರಯಾಣಿಕನ ಮೇಲೆ ಬಿಜೆಪಿ ಶಾಸಕ, ಸಹಚರರಿಂದ ಹಲ್ಲೆ

Date:

Advertisements

ನವದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಿಟಕಿ ಸೀಟಿನ ವಿಚಾರವಾಗಿ ಬಿಜೆಪಿ ಶಾಸಕ ರಾಜೀವ್ ಸಿಂಗ್ ಮತ್ತು ಅವರ ಬೆಂಬಲಿಗರು ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆದರೆ, ದಾಳಿ ಸಂಬಂಧ ದೂರು ದಾಖಲಿಸಲು ಸಂತ್ರಸ್ತ ವ್ಯಕ್ತಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಆದಾಗ್ಯೂ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕ ಸುಪ್ರಿಯಾ ಶ್ರೀನಾಟೆ, “ಕಿಟಕಿ ಸೀಟನ್ನು ಬಿಟ್ಟುಕೊಡಲು ನಿರಾಕರಿಸಿದ ಸಹ-ಪ್ರಯಾಣಿಕನ ಮೇಲೆ ಬಿಜೆಪಿ ಶಾಸಕ ಸಿಂಗ್ ತನ್ನ ‘ಗೂಂಡಾ ಬೆಂಬಲಿಗ’ರಿಂದ ದಾಳಿ ಮಾಡಿಸಿದ್ದಾರೆ. ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಆಪ್ತನಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಬಿಜೆಪಿ, “ಸಿಂಗ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಏಳು ದಿನಗಳಲ್ಲಿ ಲಿಖಿತ ವಿವರಣೆ ನೀಡುವಂತೆ ಕೇಳಲಾಗಿದೆ” ಎಂದು ಹೇಳಿದೆ.

Advertisements

ನೋಟಿಸ್‌ನಲ್ಲಿ, “ಸಿಂಗ್ ಅವರ ನಡವಳಿಕೆ ಪಕ್ಷದ ವರ್ಚಸ್ಸಿನ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಸೂಚಿತ ಅವಧಿಯೊಳಗೆ ಪ್ರತಿಕ್ರಿಯೆ ನೀಡದಿದ್ದಲ್ಲಿ ಅಥವಾ ನೀಡಿದ ವಿವರಣೆಯು ತೃಪ್ತಿಕರವಾಗಿರದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಸಲಾಗಿದೆ.

ಕಳೆದ ಗುರುವಾರ ಸಂಜೆ ವಂದೇ ಭಾರತ್ ರೈಲಿನಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸರ್ಕಾರಿ ರೈಲ್ವೆ ಪೊಲೀಸರ (ಜಿಆರ್‌ಪಿ) ಪ್ರಕಾರ, ಸೀಟು ಬದಲಾಯಿಸುವ ವಿಚಾರದಲ್ಲಿ ಉಂಟಾದ ವಿವಾದ ಮತ್ತು ಸಹ ಪ್ರಯಾಣಿಕನ ಅನುಚಿತ ವರ್ತನೆಯಿಂದ ಘಟನೆ ನಡೆದಿದೆ. ರೈಲು ಝಾನ್ಸಿ ನಿಲ್ದಾಣವನ್ನು ತಲುಪಿದಾಗ ಶಾಸಕರ ಬೆಂಬಲಿಗರು ರೈಲು ಹತ್ತಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಜಿಆರ್‌ಪಿ ಪೊಲೀಸರು ಸಿಂಗ್ ವಿರುದ್ಧ ನಾನ್-ಕಾಗ್ನಿಜನಬಲ್ ರಿಪೋರ್ಟ್ (ಎನ್‌ಸಿಆರ್) ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X