ಮಳೆಯಿಂದ ಡ್ರಾನಲ್ಲಿ ಅಂತ್ಯವಾದ ಎರಡನೇ ಟೆಸ್ಟ್; ಭಾರತಕ್ಕೆ ಸರಣಿ ಜಯ

Date:

Advertisements

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಅಂತಿಮ ದಿನ ದಿನವಿಡೀ ಮಳೆ ಸುರಿದ ಕಾರಣ ರೋಹಿತ್‌ ಶರ್ಮಾ ನೇತೃತ್ವದ ಭಾರತದ ತಂಡ 2-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್‌ ಮಾಡುವ ಆಸೆ ಕೈಗೂಡಲಿಲ್ಲ.

ಐದನೇ ದಿನದ ಆಟದಲ್ಲಿ ಚಹ ವಿರಾಮದವರೆಗೂ ಮಳೆ ನಿಲ್ಲದ ಕಾರಣ ದಿನದಾಟವನ್ನು ರದ್ದುಗೊಳಿಸಲಾಯಿತು. ಈ ಮೂಲಕ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಅಭಿಯಾನದ ಮೊದಲ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಕ್ವೀನ್ಸ್‌ ಪಾರ್ಕ್‌ನ ಓವಲ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಗೆಲುವಿಗೆ ಭಾರತ 365 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಾಲ್ಕನೇ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತ್ತು. ಐದನೇ ದಿನದಲ್ಲಿ ವಿಂಡೀಸ್‌ ಗೆಲುವಿಗೆ 289 ರನ್‌ಗಳ ಅಗತ್ಯವಿತ್ತು. ಭಾರತ ಜಯಗಳಿಸಲು 8 ವಿಕೆಟ್‌ಗಳನ್ನು ಉರುಳಿಸಬೇಕಿತ್ತು. ಆದರೆ ಮಳೆಯಿಂದ ಇದ್ಯಾವುದು ಫಲಿಸಲಿಲ್ಲ.

Advertisements

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ವಿರಾಟ್‌ ಕೊಹ್ಲಿ ಶತಕದ ನೆರವಿನಿಂದ 438 ರನ್ ಪೇರಿಸಿತ್ತು. ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟ್‌ ಆದಕಾರಣ ಟೀಂ ಇಂಡಿಯಾ 183 ರನ್‌ಗಳ ಮುನ್ನಡೆ ಪಡೆದಿತ್ತು. ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್‌ಗೆ 181 ರನ್‌ ಗಳಿಸುವ ಮೂಲಕ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಒಟ್ಟು 364 ರನ್‌ಗಳ ಗುರಿ ಬೆನ್ನಟ್ಟಿದ ಕಾರ್ಲೋಸ್ ಬ್ರಾತ್‌ವೈಟ್ ಪಡೆ ನಾಲ್ಕನೇ ದಿನದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತ್ತು.

ಈ ಸುದ್ದಿ ಓದಿದ್ದೀರಾ? ವಿಂಡೀಸ್‌ ವಿರುದ್ಧ ದ್ವಿತೀಯ ಟೆಸ್ಟ್‌: ಕೊಹ್ಲಿಗೆ 500ನೇ ಪಂದ್ಯ, ಭಾರತಕ್ಕೆ ನೂರನೇ ಟೆಸ್ಟ್

ಐದು ವಿಕೆಟ್ ಕಬಳಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಕ್ಕೆ ಭಾಜನರಾದರು. ಇದಕ್ಕೂ ಮೊದಲು ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಇನ್ನಿಂಗ್ಸ್ ಹಾಗೂ 141 ರನ್‌ಗಳ ಜಯ ಸಾಧಿಸಿತ್ತು. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ 2023-25 ಅಂಕಪಟ್ಟಿಯಲ್ಲಿ ಭಾರತ 16 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.

ವೆಸ್ಟ್ ಇಂಡೀಸ್ 4 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಪಾಕಿಸ್ತಾನ ಒಂದು ಪಂದ್ಯವಾಡಿ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಮೂರು ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 27ರಿಂದ ಶುರುವಾಗಲಿದೆ. ನಂತರ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 03 ರಿಂದ ಆರಂಭಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X