ಬಡ ಜನರಿಂದ ಹಣ ಪಡೆಯುವ ದಾರಿದ್ರ್ಯ ನನಗಿಲ್ಲ: ಜಮೀರ್ ಅಹ್ಮದ್ ಖಾನ್

Date:

Advertisements

ಬಡವರಿಂದ ಹಣ ಪಡೆಯುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ. ಬಡ ಜನರಿಂದ ದುಡ್ಡು ಪಡೆದವರು, ಪಡೆಯುವವರು ಹುಳ ಬಿದ್ದು ಸಾಯುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆಯಲಾಗಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರ ಆರೋಪವನ್ನು ಜಮೀರ್ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿ.ಆರ್ ಪಾಟೀಲ್ ಅವರು ತುಂಬಾ ಹಿರಿಯರು. ಬಡವರ ಬಗ್ಗೆ ಕಾಳಜಿ ಇರುವವರು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ನನಗೆ ಅರ್ಥವಾಗಿಲ್ಲ” ಎಂದಿದ್ದಾರೆ.

“ಪಾಟೀಲ್ ಅವರು ನನ್ನ ಬಗ್ಗೆ ಮಾತನಾಡಿದ್ದಾರಾ? ಸಚಿವರು ಅಂತ ಹೇಳಿದ್ದಾರಾ? ಯಾವ ಇಲಾಖೆ ಎಂದೇನಾದರೂ ಹೇಳಿದ್ದಾರೆಯೇ? ಲಂಚ ಪಡೆದವರು ಯಾರು ಅಂತ ಅವರು ಹೇಳಬೇಕಲ್ಲವೇ? ಆಗ ಮಾತ್ರವೇ ತಾನೇ ಏನಾದರೂ ಕ್ಲಾರಿಟಿ ಸಿಗೋದು. ಈ ಬಗ್ಗೆ ತನಿಖೆ ಆಗಬೇಕು. ತನಿಖೆಯನ್ನು ಸಿಬಿಐಗೆ ಕೊಡಲಿ” ಎಂದು ಹೇಳಿದ್ದಾರೆ.

Advertisements

ಈ ಲೇಖನ ಓದಿದ್ದೀರಾ?: ಇಸ್ರೇಲ್-ಇರಾನ್ ಸಂಘರ್ಷ | ಭಾರತಕ್ಕೆ ಗಂಭೀರ ಸವಾಲುಗಳು, ಪರಿಣಾಮಗಳು

“ನಾನು ಮಂತ್ರಿ ಆದಮೇಲೆ ಇಲಾಖೆಯಿಂದ 36,000 ಮನೆ ಕಟ್ಟಿದ್ದೇನೆ. ಜನರಿಗೆ ಬಿಜೆಪಿ, ಜೆಡಿಎಸ್‌ನವರು ಒಂದೇ ಒಂದು ಮನೆ ಕಟ್ಟಿದ್ದಾರೆಯೇ? ಕೊಟ್ಟಿದ್ದರೆ ಅವರು ಹೇಳಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದಿದ್ದಾರೆ.

“ಶಾಸಕರು ನೀಡಿದ ಪತ್ರದ ಮೇಲೆಯೇ ನಾವು ಮನೆ ಹಂಚಿಕೆ ಮಾಡಿದ್ದೇವೆ. 42,300 ಮನೆಗಳನ್ನು ಕೊಡಲು ನಾವು ನಿರ್ಧರಿಸಿದ್ದೆವು. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ 14 ಲಕ್ಷ ಮನೆ ಕೊಟ್ಟಿದ್ದರು. ನಂತರ ಬಂದ ಸರ್ಕಾರ 5.8 ಲಕ್ಷ ಮನೆಗಳನ್ನು ನೀಡಿದೆ. ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X