ಐಸಿಸಿ ಕೆಂಗಣ್ಣಿಗೆ ಗುರಿಯಾದ ರಿಷಭ್ ಪಂತ್: ಏನಿದು ವಿವಾದ, ಶಿಕ್ಷೆ?

Date:

Advertisements

ಲೀಡ್ಸ್ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್​ ಅವರು ಐಸಿಸಿಯಿಂದ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್‌ಗೆ ವಾಗ್ದಂಡನೆ ವಿಧಿಸಲಾಗಿದ್ದು, ಪಂತ್ ಅವರು ಲೆವೆಲ್ 1 ರ ಅಡಿಯಲ್ಲಿ ತಪ್ಪಿತಸ್ಥನೆಂದು ಕಂಡುಬಂದಿದೆ. ಹೀಗಾಗಿ ಮ್ಯಾಚ್ ರೆಫರಿ, ಪಂತ್​ಗೆ ವಾಗ್ದಂಡನೆ ವಿಧಿಸಿದ್ದಾರೆ.

ಪಂತ್ ವಿರುದ್ಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಲಾಗಿಲ್ಲ. ಐಸಿಸಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರವನ್ನು ಪ್ರತಿಭಟಿಸುವುದು ಅಥವಾ ಆಕ್ಷೇಪಿಸುವುದಕ್ಕೆ ಸಂಬಂಧಿಸಿದ ಆರ್ಟಿಕಲ್ 2.8 ರ ಅಡಿಯಲ್ಲಿ ಪಂತ್ ತಪ್ಪಿತಸ್ಥನೆಂದು ಕಂಡುಬಂದಿದ್ದಾರೆ. ಹೀಗಾಗಿ ಈ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂತ್ ಅವರ ಖಾತೆಗೆ 1 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ ಎಂದು ಐಸಿಸಿ ತಿಳಿಸಿದೆ.

Advertisements

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ವಿರುದ್ಧ ಮೊದಲ ಟೆಸ್ಟ್ | ಜೈಸ್ವಾಲ್‌ ಶತಕ: ರಾಹುಲ್‌ – ಗಿಲ್‌ ಐತಿಹಾಸಿಕ ದಾಖಲೆ

ಲೀಡ್ಸ್ ಟೆಸ್ಟ್‌ನ ಮೂರನೇ ದಿನದಂದು ಇಂಗ್ಲೆಂಡ್‌ನ ಮೊದಲ ಇನಿಂಗ್ಸ್‌ನ 61 ನೇ ಓವರ್‌ನಲ್ಲಿ ಚೆಂಡಿನ ಆಕಾರ ಬದಲಾಗಿದ್ದು ಅದನ್ನು ಬದಲಿಸುವಂತೆ ಪಂತ್, ಅಂಪೈರ್ ಬಳಿ ಮನವಿ ಮಾಡಿದರು. ಆದರೆ ಚೆಂಡನ್ನು ಗೇಜ್​ನಿಂದ ಪರೀಕ್ಷಿಸಿದ ಅಂಪೈರ್, ಚೆಂಡು ನಿಯಮಗಳಿಗನುಸಾರವಾಗಿ ಇದ್ದ ಕಾರಣ ಚೆಂಡನ್ನು ಬದಲಾಯಿಸಲು ನಿರಾಕರಿಸಿದರು. ಇದರಿಂದ ಅಸಮಾಧಾನಗೊಂಡ ಪಂತ್, ಅಂಪೈರ್ ಮುಂದೆ ಚೆಂಡನ್ನು ನೆಲದ ಮೇಲೆ ಎಸೆಯುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಪಂತ್​ಗೆ ಇದೀಗ ವಾಗ್ದಂಡನೆ ವಿಧಿಸಲಾಗಿದೆ.

ಐಸಿಸಿ ಪತ್ರಿಕಾ ಪ್ರಕಟಣೆಯ ಪ್ರಕಾರ, ರಿಷಭ್ ಪಂತ್ ಆ ಪ್ರಕರಣದಲ್ಲಿ ತನ್ನ ತಪ್ಪನ್ನು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಬಳಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲ. ಆನ್-ಫೀಲ್ಡ್ ಅಂಪೈರ್‌ಗಳಾದ ಪಾಲ್ ರೈಫಲ್ ಮತ್ತು ಕ್ರಿಸ್ ಜಾಫ್ನಿ ಪಂತ್ ಅವರ ಪ್ರತಿಭಟನೆಯ ಬಗ್ಗೆ ಪಂದ್ಯದ ರೆಫರಿಗೆ ದೂರು ನೀಡಿದ್ದರು. ಅವರಲ್ಲದೆ, ಮೂರನೇ ಅಂಪೈರ್ ಶರ್ಫುದುಲ್ಲಾ ಮತ್ತು ನಾಲ್ಕನೇ ಅಂಪೈರ್ ಮೈಕ್ ಬರ್ನ್ಸ್ ಕೂಡ ಆರೋಪಗಳನ್ನು ಮಾಡಿದ್ದರು ಎಂದು ಐಸಿಸಿ ತಿಳಿಸಿದೆ.

ವಾಸ್ತವವಾಗಿ ಐಸಿಸಿ ನಿಯಮಗಳ ಹಂತ 1 ರ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಆಟಗಾರರಿಗೆ ಕನಿಷ್ಠ ಶಿಕ್ಷೆ ವಾಗ್ದಂಡನೆಯಾಗಿದೆ. ಗರಿಷ್ಠ ಶಿಕ್ಷೆಯೆಂದರೆ ಅವರ ಪಂದ್ಯ ಶುಲ್ಕದಲ್ಲಿ ಶೇಕಡಾ 50 ರಷ್ಟು ಕಡಿತ ಮತ್ತು ಒಂದು ಅಥವಾ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗುವುದು. ಇದೀಗ ಪಂತ್, ಹಂತ 1 ರ ಅಡಿಯಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ವಾಗ್ದಂಡನೆ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X