ಕೊಪ್ಫಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರೈತರ ವಿರೋಧ; ಕೋರ್ಟ್ ಮೊರೆ ಹೋಗುವ ಎಚ್ಚರಿಕೆ

Date:

Advertisements

ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ ಗ್ರಾಮದ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಯುಕೆಇಎಂ ಲಿ. ಕಂಪನಿಯು ಗೊಂಡಬಾಳ ಗ್ರಾಮ ಪಂಚಾಯತಿಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ಕುರಿತು ಗ್ರಾಮ ಪಂಚಾಯತಿ ತಕರಾರು ಅರ್ಜಿ ಸಲ್ಲಿಸಲು ಬಹಿರಂಗ ಸೂಚನೆ ಹೊರಡಿಸಿದೆ. ಈ ಹಿನ್ನೆಲೆ ಮುದ್ದಾಬಳ್ಳಿ ಹಾಗೂ ಸುತ್ತಲಿನ ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿ, ತಕರಾರು ಅರ್ಜಿ ಸಲ್ಲಿಸಿದ್ದಾರೆ. ಕಾರ್ಖಾನೆ ಸ್ಥಾಪಿಸಲು ಮುಂದಾದರೆ ಕೋರ್ಟ್‌ ಮೊರೆ ಹೋಗುವುದಾಗಿ ಹಾಗೂ ಬೃಹತ್‌ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಈಗಾಗಲೇ ಕೈಗಾರಿಕಾ ಕಾರ್ಖಾನೆಗಳ ಸ್ಥಾಪನೆ ಹಾಗೂ ವಿಸ್ತರಣೆಯನ್ನು ವಿರೋಧಿಸಿ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕೆಲವು ತಿಂಗಳ ಹಿಂದೆ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರೋಧಿಸಿ ಸಾವಿರಾರು ಜನ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಮತ್ತೆ ಮುದ್ದಾಬಳ್ಳಿ ಗ್ರಾಮದಲ್ಲಿ ಕಾರ್ಖಾನೆಯ ವಿರುದ್ಧ ಕೂಗು ಕೇಳಿ ಬರುತ್ತಿದೆ.

ಈಗಾಗಲೇ ಕಾರ್ಖಾನೆಯ ಧೂಳು, ಹೊಗೆ ತಾಲೂಕಿನ ಸುಮಾರು 30 ಹಳ್ಳಿಯ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ಕೊಪ್ಪಳ ಪರಿಸರ ಪ್ರೇಮಿಗಳು ಹಾಗೂ ಜಿಲ್ಲಾ ಬಚಾವೋ ಆಂದೋಲನ ಹೋರಾಟಗಾರರು ಕೊಪ್ಪಳದ ಸುತ್ತಮುತ್ತಲೂ ಯಾವುದೇ ಹೊಸ ಕಾರ್ಖಾನೆಗಳು ಸ್ಥಾಪನೆಯಾಗುವುದು ಬೇಡ ಎಂದು ಬೃಹತ್ ಮಟ್ಟದ ಹೊರಾಟ ಮಾಡಿ ಸರಕಾರವನ್ನು ಎಚ್ಚರಿಸಿದ್ದೂ ಆಯಿತು.

Advertisements

ಇದೀಗ ಮುದ್ದಾಬಳ್ಳಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದು, ಈಗಾಗಲೇ ಕಂಪನಿ ಕಾರ್ಖಾನೆ ಸ್ಥಾಪನೆಗೆ ಸರಕಾರದ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು; ಕೊನೆಯದಾಗಿ ಗೊಂಡಬಾಳ ಪಂಚಾಯತಿಯಿಂದ ನಿರಪೇಕ್ಷಣ ಪಡೆಯಲು ಅರ್ಜಿ ಸಲ್ಲಿಸಿದೆ.

ಈ ಕುರಿತು ಗೊಂಡಬಾಳ ಗ್ರಾಮ ಪಂಚಾಯತಿಯು ಬಹಿರಂಗ ನೋಟಿಸ್ ಹೊರಡಿಸಿದ್ದು, ಸಾರ್ವಜನಿಕರು ಗ್ರಾಮಸ್ಥರು ತಕರಾರು ಅರ್ಜಿಗಳಿದ್ದಲ್ಲಿ ಕಾಲಮಿತಿಯಲ್ಲಿ ಗ್ರಾಮ ಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದೆ. ಈ ಹಿನ್ನೆಲೆ ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೆ ಗೊಂಡಬಾಳ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಗಳ ಜನರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.

ಇದನ್ನೂ ಓದಿ: ಕೊಪ್ಪಳ | ವಿಶ್ವಕ್ಕೆ ಭಾರತ ಕೊಟ್ಟ ಅಮೂಲ್ಯ ಸಂಪತ್ತು ʼಯೋಗʼ: ಕುಲಕರ್ಣಿ

ಯಾವುದೇ ಕಾರಣಕ್ಕೂ ಮುದ್ದಾಬಳ್ಳಿ ಗೊಂಡಬಾಳ ಸೀಮಾ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವುದು ಬೇಡ
ಎನ್ನುವ ಕೂಗು ಈ ಹಿಂದೆಯೂ ಪ್ರಬಲವಾಗಿ ವ್ಯಕ್ತವಾಗಿತ್ತು. ಈ ಹಿಂದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಅಹವಾಲು ಸಭೆಯಲ್ಲೂ ಸಹಿತ ನೂರಾರು ರೈತರು ನಮಗೆ ಸಕ್ಕರೆ ಕಾರ್ಖಾನೆ ಬೇಡ ಎನ್ನುವಂತ ತಕರಾರು ಮನವಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು.

ಇವೆಲ್ಲ ಬೆಳವಣಿಗೆಗಳ ಮಧ್ಯೆಯು ಕಾಣದ ರಾಜಕೀಯ ಆಟದಿಂದ ಮುದ್ದಾಬಳ್ಳಿ ಯುಕೆಇಎಂ ಕಂಪನಿಯು ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಹವಣಿಸುತ್ತಿದೆ. ಕಾರ್ಖಾನೆಯ ಸ್ಥಾಪನೆಗೆ ಎಲ್ಲ ತಯಾರಿಯನ್ನು ಮಾಡಿಕೊಂಡಿದೆ. ಆದರೆ ಜನರು ಇದಕ್ಕೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತರು ದಿಢೀರ್ ಪ್ರತಿಭಟನೆ ನಡೆಸಿ ಗ್ರಾಪಂಗೆ ತಕರಾರು ಅರ್ಜಿ ಸಲ್ಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೋರ್ಟ್ ಮೋರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X