ಸಂಸತ್‌ನಲ್ಲಿ ಮುಂದುವರೆದ ಪ್ರತಿಭಟನೆ; ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ‘ಇಂಡಿಯಾ’ ನಿರ್ಧಾರ

Date:

Advertisements

ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ಸರ್ಕಾರ ಚರ್ಚೆ ನಡೆಸುವಂತೆ ಸರ್ಕಾರವನ್ನು ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಆಗ್ರಹಿಸಿ ಪ್ರತಿಭಟನೆ ನಡೆಸಿತು. ಗದ್ದಲ ಮುಂದುವರೆದ ಕಾರಣ ಎರಡೂ ಸದನಗಳ ಕಲಾಪ ಮುಂದೂಡಲ್ಪಟ್ಟಿದೆ.

ಈ ನಡುವೆ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳ ನಾಯಕರು ಸಭೆ ನಡೆಸಿದರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಲಾಯಿತು.

ಈ ಬಗ್ಗೆ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ”ಕಳೆದ 83 ದಿನಗಳಿಂದ ಮಣಿಪುರದಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಿದೆ. ಈ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕಾಗಿದೆ. ಮಣಿಪುರ ಹಿಂಸಾಚಾರದ ಬಗ್ಗೆ ‘ಇಂಡಿಯಾ’ ಮೋದಿ ಸರ್ಕಾರದಿಂದ ಉತ್ತರವನ್ನು ಕೇಳಬಯಸುತ್ತದೆ” ಎಂದು ಆಗ್ರಹಿಸಿದ್ದಾರೆ.

Advertisements

“ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ದುರ್ಬಲವಾಗಿದೆ ಮತ್ತು ಮಣಿಪುರ ಹಿಂಸಾಚಾರದ ಪರಿಣಾಮಗಳು ಇತರ ರಾಜ್ಯಗಳಿಗೂ ಹರಡುತ್ತಿದೆ. ಇದು ನಮ್ಮ ಸೂಕ್ಷ್ಮ ಗಡಿ ರಾಜ್ಯಗಳಿಗೆ ಒಳ್ಳೆಯದಲ್ಲ. ಪ್ರಧಾನಿ ಮೋದಿಯವರು ತಮ್ಮ ಅಹಂಕಾರವನ್ನು ತೊರೆದು ಮಣಿಪುರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪರಿಸ್ಥಿತಿಯನ್ನು ಸುಧಾರಿಸಲು ತಮ್ಮ ಸರ್ಕಾರ ಏನು ಮಾಡುತ್ತಿದೆ ಮತ್ತು ಮಣಿಪುರದಲ್ಲಿ ಯಾವಾಗ ಸಹಜ ಸ್ಥಿತಿ ಮರಳುತ್ತದೆ ಎಂಬುದನ್ನು ಪ್ರಧಾನಿ ಮೋದಿ ಹೇಳಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ: ಕಠಿಣ ಕ್ರಮಕ್ಕೆ ಖರ್ಗೆ ಆಗ್ರಹ

ಮಣಿಪುರದ ಬಗ್ಗೆ ಹೇಳಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಯಾಕೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಮಧ್ಯೆ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಕಾಶ ಕಲ್ಪಿಸುವುದಾಗಿ ಹೇಳಿದರೂ ಪ್ರಧಾನಿ ಉತ್ತರ ನೀಡಬೇಕೆಂದು ವಿಪಕ್ಷಗಳ ನಾಯಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಗದ್ದಲ ಹೆಚ್ಚಾದ ಕಾರಣ ಉಭಯ ಸದನಗಳನ್ನು ಮುಂದೂಡಲಾಯಿತು.

ರಾಜ್ಯಸಭೆಯಲ್ಲಿ ನಿನ್ನೆ ನಡೆದ ಕಲಾಪದ ಸಂದರ್ಭದಲ್ಲಿ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆ ಅಧ್ಯಕ್ಷರು ಅಮಾನತುಗೊಳಿಸಿದ್ದರು. ರಾಜ್ಯಸಭೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ಕಲಾಪ ಮುಗಿಯುವವರಿಗೆ ಅಮಾನತು ಮಾಡಲಾಗಿದೆ. ಈ ಸಂಬಂಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 26 ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿವೆ. ಜುಲೈ 20 ರಂದು ಪ್ರಾರಂಭವಾದ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ನಡೆಯಲಿದೆ. ವಿಪಕ್ಷಗಳ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ವಾಪಸ್‌ ಪಡೆಯಲು ಪ್ರತಿಪಕ್ಷಗಳ ನಾಯಕರು ನಿರಾಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X