ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ನಿರ್ಲಕ್ಷ್ಯ ವರ್ತನೆ ಮತ್ತು ಕಳಪೆ ಬೀಜ ರಸಗೊಬ್ಬರ ವಿತರಣೆ ಬಗ್ಗೆ ದೂರು ನೀಡಲು ಕಚೇರಿಗೆ ಹೋದಾಗ ಅಸಭ್ಯವಾಗಿ ವರ್ತಿಸಿದ್ದು, ಇವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
“ಕಳೆದ 19, ಜೂನ್-2025 ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಮುಂದೆ ಕೃಷಿ ಇಲಾಖೆಯಿಂದ ವಿತರಿಸಿದ್ದ ಕಳಪೆ ಬೀಜ ರಸಗೊಬ್ಬರ ವಿತರಣೆ ಚಳುವಳಿಯನ್ನು ಮಾಡಲಾಗಿತ್ತು. ಆದರೆ ಕೆಲವು ಸಂಘಟನೆಗಳು, ಚಳುವಳಿ ಮಾಡಿದವರನ್ನು ಗೂಂಡಾಗಳು ಎಂದು ಹೇಳಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಮುಖಂಡರು ಒತ್ತಾಯಿಸಿದರು.

ಜಂಟಿ ಕೃಷಿ ನಿರ್ದೇಶಕರು ಜಿಲ್ಲೆಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಒಂದೇ ಒಂದು ಗೊಬ್ಬರದ ಅಂಗಡಿಗಳಿಗೆ ಹೋಗಿ ಪರಿಶೀಲನೆ ಮಾಡಿಲ್ಲ. ಗೊಬ್ಬರ ಅಂಗಡಿಗಳ ಜೊತೆ ಒಡಂಬಡಿಕೆ ಮಾಡಿಕೊಂಡು ರೈತರನ್ನು ಅಲೆದಾಡಿಸುತ್ತಿದ್ದಾರೆ ಎಂದು ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ
ಸಭೆಯಲ್ಲಿ ಮುಖಂಡರಾದ ಜಿಲ್ಲಾಧ್ಯಕ್ಷರಾದ ಡಿ ಎಸ್ ಹಳ್ಳಿ ಮಲ್ಲಿಕಾರ್ಜುನ್, ಕಾರ್ಯದರ್ಶಿಗಳಾದ ಮರ್ಲ್ಲಹಳ್ಳಿ ರವಿಕುಮಾರ್, ಬಾಗೇನಾಳ್ ತಿಪ್ಪೇಸ್ವಾಮಿ, ಎಸ್ ಆರ್ ತಿಮ್ಮಯ್ಯ, ಭದ್ರಾ ಮೇಲ್ದಂಡೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ್, ಮುದ್ದಾಪುರ ನಾಗಣ್ಣ, ಎಲ್ ಬಸವರಾಜಪ್ಪ, ಹಳಿಯೂರು ಸಿದ್ದಣ್ಣ, ರಾಮರೆಡ್ಡಿ, ರಾಜಣ್ಣ, ಬಾಗೇನಾಳ್ ಬಸಪ್ಪ, ಲಕ್ಷ್ಮಿಕಾಂತ್, ಸೂರಪ್ಪ ನಾಯಕ, ಟಿ ವೆಂಕಟೇಶ್, ತಿಮ್ಮೇಶ್, ತಿರುಮಲಾಪುರ ಸಿದ್ದರಾಮಣ್ಣ, ಆಡನೂರು ಶಿವಕುಮಾರ್, ವೀರಣ್ಣ ಹೊಸಳ್ಳಿ ಮುಂತಾದ ಮುಖಂಡರುಗಳು ಭಾಗವಹಿಸಿದ್ದರು.