ಮೈಸೂರು | ಪ್ರತಿ ಮನೆಯಲ್ಲೂ ಮಕ್ಕಳು ಇದ್ದಂತೆ ಪುಸ್ತಕಗಳು ಇರಬೇಕು : ಡಾ. ಸಿ. ಪಿ. ಕೃಷ್ಣಕುಮಾರ್

Date:

Advertisements

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರ ಗ್ರಂಥಾಲಯಕ್ಕೆ ಪುಸಕ್ತ ಕೊಡುಗೆ ಕಾರ್ಯಕ್ರಮದಲ್ಲಿ ಹಿರಿಯ ಕವಿ ಡಾ. ಸಿ. ಪಿ. ಕೃಷ್ಣಕುಮಾರ್ ಮಾತನಾಡಿ ‘ ಪ್ರತಿ ಮನೆಯಲ್ಲೂ ಮಕ್ಕಳು ಇದ್ದಂತೆ ಪುಸ್ತಕಗಳು ಇರಬೇಕು ‘ ಎಂದು ಹೇಳಿದರು.

ಪ್ರತಿಯೊಬ್ಬರು ಪುಸ್ತಕಗಳನ್ನ ಓದಬೇಕು. ಇತ್ತೀಚೆಗೆ ಮೊಬೈಲ್ ಹಾವಳಿಯಿಂದ ಪುಸ್ತಕ ಓದುವವರ ಸಂಖ್ಯೆ ಕ್ಷೀಣಿಸಿದೆ. ಉತ್ತಮ ಬರಹಗಾರರು ಕಣ್ಮರೆ ಆಗುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಮೊಬೈಲ್ ನೀಡುವ ಬದಲು ಪುಸ್ತಕ ನೀಡಿ. ಜ್ಞಾನರ್ಜನೆಗೆ ಓದು ಬಹಳ ಮುಖ್ಯವಾದದ್ದು. ಓದಿನಿಂದ ಎಲ್ಲವೂ ಸಾಧ್ಯ. ಮೊಬೈಲ್ ಬಳಕೆಯಿಂದ ಓದುವ ಹವ್ಯಾಸ ಮರೆಯಾಗುತ್ತಿರುವುದು ಶೋಚನಿಯ. ಮನೆಯಲ್ಲಿಯೇ ಮನೆ ಮಂದಿಗಳ ಸಂಭಂದ ಅರಿಯದ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ಮೊಬೈಲ್ ಇದ್ದರೆ ಸಾಕು ಮತ್ತೇನು
ಬೇಡ ಅನ್ನುವ ಮಟ್ಟಿಗೆ ಆವರಿಸಿದೆ. ಇದನ್ನ ಹೋಗಲಾಡಿಸಿ ಓದಿನ ಆಸಕ್ತಿ ಬೆಳೆಸಿಕೊಳ್ಳಬೇಕು.

ಓದಿನಿಂದ ಎಲ್ಲವನ್ನು ಕಂಡುಕೊಳ್ಳಲು ಸಾಧ್ಯವಿದೆ. ಕೊಂಡುಕೊಳ್ಳಲು ಸಾಧ್ಯವಿಲ್ಲ. ಓದು ತೆರೆದ ಪುಟವಾಗಿದ್ದು ಒಳ್ಳೆಯ ಆಲೋಚನೆ, ಗುರಿಯ ಕಡೆಗೆ ಕರೆದುಕೊಂಡು ಹೋಗುತ್ತದೆ. ಓದಿನಿಂದ ಜೀವನವು ಉತ್ತಮ ರೀತಿಯಲ್ಲಿ ರೂಪುಗೊಳ್ಳುವುದರಿಂದ ಸಮಾಜಕ್ಕೂ ತಮದೇ ಆದ ಕೊಡುಗೆ ನೀಡಲು ಸಾಧ್ಯವಿದೆ.

Advertisements

ಯಾವುದೇ ಆಧುನಿಕತೆ ತೆರೆದುಕೊಂಡರು ಅದೆಲ್ಲವೂ ಓದಿನಿಂದಲೇ ಆಗಿರುತ್ತದೆ. ಈಗೆಲ್ಲವೂ ಮೊಬೈಲ್ ನಲ್ಲಿ ಯುವ ಜನತೆ ಮುಳುಗಿ ಹೋಗಿದ್ದು ಗ್ರಂಥಾಲಯದ ಪ್ರಾಮುಖ್ಯತೆ ಅರಿವಿಲ್ಲದಂತೆ ಮಾಡಿದೆ. ಎಷ್ಟೋ ಗ್ರಂಥಾಲಯಗಳು ಓದುಗರು ಇಲ್ಲದೆ ಬಣಗುಡುತ್ತಿದೆ. ಬಾಗಿಲು ಮುಚ್ಚುತ್ತಿವೆ. ಇದಕ್ಕೆಲ್ಲ ಅವಕಾಶ ನೀಡದೆ ಎಲ್ಲರೂ ಓದುವಂತಾಗಲಿ ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಎ. ಎಸ್. ಪೊನ್ನಣ್ಣ ಭೇಟಿ; ಸರ್ಕಾರದೊಂದಿಗೆ ಚರ್ಚಿಸುವ ಭರವಸೆ

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಮಾನಸ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್, ಉಪಾಧ್ಯಕ್ಷ ರವಿ ಪಾಂಡವಪುರ , ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತ ಅಧಿಕಾರಿ ಕರಿಯಪ್ಪ, ಮೈಸೂರಿನ ಸಂಚಾಲಕ ಚಂದ್ರಶೇಖರ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ ಹಾಗೂ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X