ಮಣಿಪುರ ಸರ್ಕಾರದ ವಜಾಕ್ಕೆ ಸಿಐಟಿಯು ಆಗ್ರಹ

Date:

Advertisements

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲಗೊಳಿಸಿ ಮೆರವಣೆಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿವೆ.

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು, “ಮಣಿಪುರದಲ್ಲಿ ಮೂರು ತಿಂಗಳುಗಳಿಂದ ಹಿಂಸಾಚಾರ ನಡೆಯುತ್ತಿದೆ. ಮಹಿಳಾ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಆದರೂ, ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡದೆ ಇರುವುದು ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ, ಆರ್‌ಎಸ್‌ಎಸ್‌ ಶಕ್ತಿಗಳನ್ನು ಒಳಗೊಂಡಿರುವ ಪ್ಯಾಸಿಸ್ಟ್ ಆಡಳಿತ ಈ ವಿಷಯದಲ್ಲಿ ಮೌನವಾಗಿರುವುದು ನಾಚಿಕಿಗೇಡಿನ ಸಂಗತಿಯಾಗಿದೆ. ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

Advertisements

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘದ ತಾಲೂಕು ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ, ಲಕ್ಷ್ಮಿದೇವಿ, ಅಂಬಿಕಾ, ರೇಖಾ, ಸಿಐಟಿಯು ಮಾರೆಕ್ಕ, ವಿಜಯ, ಸಂಗೀತ, ಕೋಟಗಿ ಮಲ್ಲಿಕಾರ್ಜುನ, ಆನಂದ ಹಾಗೂ ಇತರರು ಇದ್ದರು.

ರಾಯಚೂರು: ಜಿಲ್ಲೆಯ ಸಿಐಟಿಯು, ಕೆಪಿಆರ್‌ಎಸ್, ಎಐಎಡಬ್ಲ್ಯೂಯು ಸಂಘಟನೆಗಳ ಕಾರ್ಯಕರ್ತರು ಮಣಿಪುರದಲ್ಲಿನ ಹಿಂಸಾಚಾರ ಮತ್ತು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಶಾಂತಿ ಸೌಹಾರ್ದತೆಗಾಗಿ ಒತ್ತಾಯಿಸಿ, ಮಣಿಪುರ ಸರ್ಕಾರವನ್ನು ವಜಾ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ರಾಯಚೂರು ಸಿಐಟಿಯು ಪ್ರತಿಭಟನೆ
ಮಣಿಪುರದ ಘಟನೆ ಖಂಡಿಸಿ ಸಿಐಟಿಯು ಪ್ರತಿಭಟನೆ

“ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆಯನ್ನು ಖಂಡಿಸಿದರು. ಮಣಿಪುರದಲ್ಲಿ ಕಳೆದ 2 ತಿಂಗಳಿನಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು, ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ. ಮಹಿಳೆಯರು ಅತ್ಯಚಾರಕ್ಕೊಳಾಗಿ ಮಕ್ಕಳು ಅನಾಥರಾಗುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಮಣಿಪುರದಲ್ಲಿ ಶಾಂತಿ ಸ್ಥಾಪನೆಗಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಕೇವಲ ಮಹಿಳೆಯರ ಬಗ್ಗೆ ಮಾತನಾಡುತ್ತಿರುವ ಕೇಂದ್ರ-ರಾಜ್ಯ ಸರ್ಕಾರಗಳು ಅಲ್ಲಿನ ಮಹಿಳೆಯರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಾಮೂಹಿಕ ಅತ್ಯಾಚಾರಕ್ಕೆ ಅಲ್ಲಿನ ಪೊಲೀಸರು ಪರೋಕ್ಷ ಬೆಂಬಲ ನೀಡಿದ್ದಾರೆ. ಮಣಿಪುರ ರಾಜ್ಯದಲ್ಲಿ ಇಂಟರ್‌ನೆಟ್ ಕಡಿತಗೊಳಿಸಿ ಅತ್ಯಾಚಾರ, ಹತ್ಯೆಗಳು, ಮಹಿಳೆಯರ ಬೆತ್ತಲೆ ಮೆರವಣಿಗೆಗಳಿಗೆ ಅಲ್ಲಿನ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡುವ ಮೂಲಕ ಅಲ್ಲಿ ಹಿಂಸಾಚಾರ ನಡೆಸಲು ಪರೋಕ್ಷ ಬೆಂಬಲ ನೀಡುತ್ತಿದೆ” ಎಂದು ಆರೋಪಿಸಿದರು.

“ಮಹಿಳೆಯರ ಮೇಲಿನ ಅತ್ಯಾಚಾರ ಘಟನೆ ನಡೆದು 2 ತಿಂಗಳಾದರೂ ಮಾತನಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನವನ್ನು ತೋರಿಸಿರುವುದು ಸರಿಯಾದ ಕ್ರಮವಲ್ಲ. ಸಾರ್ವಜನಿಕರ ರಕ್ಷಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪುರ ಸರ್ಕಾರ ವಿಫಲ; ದಸಂಸ ಕಿಡಿ

“ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮಣಿಪುರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು. ಮಣಿಪುರದಲ್ಲಿ ಹಿಂಸಾಚಾರ ತಡೆಗಟ್ಟಲು ವಿಫಲವಾಗಿರುವ ಮಣಿಪುರದ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರಾದ ಡಿ.ಎಸ್. ಶರಣಬಸವ, ಹೆಚ್. ಪದ್ಮಾ, ಕರಿಯಪ್ಪ ಹಚ್ಚೊಳ್ಳಿ, ರಂಗಪ್ಪ ಯಾಪಲದಿನ್ನಿ, ರಂಗನಗೌಡ, ವರಲಕ್ಷ್ಮಿ, ತಾಯಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X