Ind vs Eng Test | ಭಾರತದ ಐದು ಶತಕ ವಿಫಲ, ಇಂಗ್ಲೆಂಡ್‌ಗೆ ರೋಚಕ ಗೆಲುವು

Date:

Advertisements

ಇಂಗ್ಲೆಂಡ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ಶತಕ ಗಳಿಸಿಯೂ ಭಾರತ ತಂಡವು ಸೋಲನುಭವಿಸಿದೆ.

ಐದು ವಿಕೆಟ್ ಅಂತರದ ಜಯ ಗಳಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. 371 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಬೆನ್ ಡಕೆಟ್ ಅಮೋಘ ಶತಕದ (149) ಬೆಂಬಲದೊಂದಿಗೆ ಇಂಗ್ಲೆಂಡ್ ರೋಚಕ ಗೆಲುವು ದಾಖಲಿಸಿತು.‌

ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ 465 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 364 ರನ್​ಗಳಿಗೆ ಆಲೌಟ್ ಆದರು. ಅತ್ತ 371 ರನ್​ಗಳ ಗುರಿಯನ್ನು ಇಂಗ್ಲೆಂಡ್ 82 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿದೆ.

Advertisements

ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

148 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪಂದ್ಯವೊಂದರಲ್ಲಿ 5 ಶತಕ ಸಿಡಿಸಿರುವುದು ಕೇವಲ ಮೂರು ಬಾರಿ. ಹೀಗೆ 5 ಶತಕ ಸಿಡಿಸಿ ಅಬ್ಬರಿಸಿದ ತಂಡಗಳೆಲ್ಲವೂ ಭರ್ಜರಿ ಜಯ ಸಾಧಿಸಿದ್ದರೆ ಭಾರತ ಪಾಲಿಗೆ ಗೆಲುವಿನ ಅದೃಷ್ಟವಿಲ್ಲ.

ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಒಟ್ಟು ಏಳು ಶತಕಗಳು ದಾಖಲಾದವು. ಅಂತಿಮ ದಿನದಾಟದಲ್ಲಿ ಬೆನ್ ಡಕೆಟ್ ಅವರ ಸೊಗಸಾದ ಶತಕ ಇಂಗ್ಲೆಂಡ್ ಗೆಲುವು ತಂದುಕೊಟ್ಟಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X