ಸಿ ಟಿ ರವಿ ರಾಜ್ಯಾಧ್ಯಕ್ಷ, ಯತ್ನಾಳ್‌ ವಿಪಕ್ಷ ನಾಯಕ ಎಂದು ಸುಳಿವು ನೀಡಿದ ಎಚ್‌ ಡಿ ದೇವೇಗೌಡ

Date:

Advertisements

ಚುನಾವಣೆ ಮುಗಿದು ಸರ್ಕಾರ ರಚನೆ ಆಗಿ ವಿಧಾನಮಂಡಲ ಅಧಿವೇಶನ ಮುಗಿದರೂ ಬಿಜೆಪಿ ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರಾಗುತ್ತಾರೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಹೀಗಿರುವಾಗ ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡರು ಮಹತ್ವದ ಸುಳಿವು ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸಿ ಟಿ ರವಿ, ವಿರೋಧ ಪಕ್ಷದ ನಾಯಕ ಯತ್ನಾಳ್ ಎಂಬುದು ಈಗಾಗಲೇ ಒಂದು ಹಂತದ ಚರ್ಚೆ ಆಗಿದೆ. ಅವರ ಪಕ್ಷದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಾವು ಗಮನಹರಿಸುವುದಿಲ್ಲ. ಅದು ಅವರಿಗೆ ಸೇರಿದ ವಿಚಾರ ನಮಗೆ ಯಾಕೆ ಬೇಕು” ಎಂದು ಹೇಳಿದರು.

ಸದನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ಎಂದು ಬಹುತೇಕ ತೀರ್ಮಾನ ಆಗಿದೆ. ಹೀಗಾಗಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಜೆಡಿಎಸ್‌ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ: ಎಚ್‌ ಡಿ ದೇವೇಗೌಡ ತಿರುಗೇಟು

ರಾಜ್ಯದಲ್ಲಿ ಅಧಿಕೃತ ವಿರೋಧ ಪಕ್ಷ ಬಿಜೆಪಿಯೇ ಆಗಿದೆ. ನಮ್ಮದು ಅನಧಿಕೃತ ವಿಪಕ್ಷ. ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಹೋಗಿಲ್ಲ. ವಿರೋಧಿ ವಿಚಾರ ಬಂದಾಗ ಹೋರಾಟ ನಡೆಯುತ್ತದೆ. ಕಾಂಗ್ರೆಸ್ ಇದ್ದಾಗಲೂ ನಡೆದಿದೆ, ಬಿಜೆಪಿ ಇದ್ದಾಗಲೂ ನಡೆಯುತ್ತಿದೆ. ಕಾಂಗ್ರೆಸ್ ವಿಪಕ್ಷ ಇದ್ದಾಗಲೂ ಒಟ್ಟಿಗೆ ವಿರೋಧ ಮಾಡಿದ್ದೇವೆ. ಇದರಲ್ಲಿ ಹೊಂದಾಣಿಕೆ ಎನ್ನುವ ವಿಚಾರ ಬಳಸುವುದು ಬೇಡ ಎಂದು ಸ್ಪಷ್ಟನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X