ಬೀದರ್ | ಲೋಕ ನಿರ್ಮಿತಿಗೆ ಕಾವ್ಯ ಮುನ್ನೆಲೆಗೆ ಬರಬೇಕು: ಬೇಲೂರು ರಘನಂದನ್

Date:

Advertisements

ಕಾವ್ಯ ರಚಿಸುವ ಕವಿಗಳು ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳದೆ, ಮಾನವೀಯ ಮೌಲ್ಯದೊಂದಿಗೆ ನೊಂದವರ ಧ್ವನಿಯಾಗಿ ಲೋಕದ ಸಂಕಟಕ್ಕೆ ಸ್ಪಂದಿಸಬೇಕು ಎಂದು ಕವಿ ಹಾಗೂ ರಂಗಕರ್ಮಿ ಡಾ. ಬೇಲೂರು ರಘುನಂದನ್ ಅಭಿಪ್ರಾಯಪಟ್ಟರು.

ಬೀದರ್ ನಗರದಲ್ಲಿ ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ ಏರ್ಪಡಿಸಿದ ರಾಜ್ಯ ಮಟ್ಟದ ಒಂದು ದಿನದ ‘ಕಾವ್ಯ ಕಮ್ಮಟ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕನ್ನಡ ಕಾವ್ಯ ಪರಂಪರೆಯ ಓದಿನೊಂದಿಗೆ ಚರ್ಚೆ, ಸಂವಾದ, ಅನುಸಂಧಾನದ ಮೂಲಕ ಕವಿಗಳು ತಮ್ಮ ಜ್ಞಾನವನ್ನು ವಿಸ್ತರಿಸಿಕೊಂಡು ಕಾವ್ಯ ರಚಿಸಿದ್ದಾರೆ. ಕವಿತೆಯೊಂದನ್ನು ಕಟ್ಟಲು ಓದು ಬಹುಮುಖ್ಯ. ಕವಿತೆಗೆ ಅಭದ್ರತೆ, ಸೃಜನಶೀಲತೆ ಧಾತು, ಲೋಕ ನಿರ್ಮಿತಿಗೆ ಕಾವ್ಯ ಮುನ್ನೆಲೆಗೆ ಬರಬೇಕಾಗಿದೆ. ಇನ್ನೊಬ್ಬರ ಓಲೈಕೆಗೆ ಕಾವ್ಯ ಬರೆಯದೇ ಲೋಕದ ಸತ್ಯ, ಆತ್ಮದ ಹಸಿವು ನೀಗಿಸುವ ನಿಟ್ಟಿನಲ್ಲಿ ಕಾವ್ಯ ರಚಿಸಬೇಕು” ಎಂದು ಹೇಳಿದರು.

Advertisements

“ಕತ್ತಲೆಯಿಂದ ಬೆಳಕಿನೆಡೆಗೆ ಸಮಾಜವನ್ನು ಮುನ್ನಡೆಸುವ ಶಕ್ತಿ ಕಾವ್ಯಕ್ಕಿದೆ. ಕವಿ ಜಗತ್ತಿನ ಕಣ್ಣಿದ್ದಂತೆ. ಹೆಸರಿಗಾಗಿ ಕವಿತೆ ರಚಿಸದೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾವ್ಯ ರಚಿಸಬೇಕು” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ರವೀಂದ್ರ ಲಾಂಜವಾಡಕರ್ ಮಾತನಾಡಿ, “ಗಡಿ ಭಾಗವಾದ ಬೀದರ್ ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಅವಕಾಶ ಸಿಗದೇ ಇರುವುದರಿಂದ ಬೆಳಕಿಗೆ ಬರಲು ಆಗುತ್ತಿಲ್ಲ. ರಾಜಧಾನಿಯಲ್ಲಿ ಗಡಿಭಾಗದ ಕವಿಗಳಿಗೆ ವೇದಿಕೆ ಸಿಗುವಂತಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೃಷಿ ಬೆಲೆ ಆಯೋಗದ ಅವಧಿ ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಡಾ.ಸಂಜೀವಕುಮಾರ ಅತಿವಾಳೆ ಮಾತನಾಡಿ, “ಪ್ರತಿಭಾವಂತ ಬರಹಗಾರರಿಗೆ, ಸಾಹಿತಿಗಳಿಗೆ, ಕಲಾವಿದರಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಕಮ್ಮಟ, ವಿಚಾರ ಸಂಕಿರಣ, ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ಗಡಿ ಜಿಲ್ಲೆಯಲ್ಲಿ ಕನ್ನಡ ಕಟ್ಟುವ ಕಾರ್ಯ ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ ನಿರಂತರವಾಗಿ ಮಾಡಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಭೀಮಶಾ ಬಸಲಾಪೂರ‌, ಲಕ್ಷ್ಮಣ ಮೇತ್ರೆ, ಅಜಿತ ಎನ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X