ಬೀದರ್‌ | ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ : ಶಿವಲಿಂಗ ಹೇಡೆ

Date:

Advertisements

ಬಸವಾದಿ ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ ತುಂಬಿ ತುಳುಕುತ್ತಿದೆ ಎಂದು ಶಿಕ್ಷಕ ಡಾ.ಶಿವಲಿಂಗ ಹೇಡೆ ಹೇಳಿದರು.

ಲಿಂಗಾಯತ ಮಹಾ ಮಠದ ವತಿಯಿಂದ ನಗರದ ಬಸವಗಿರಿಯಲ್ಲಿ ಸೋಮವಾರ ನಡೆದ 264ನೇ ಶರಣ ಸಂಗಮ ಕಾರ್ಯಕ್ರಮದಲ್ಲಿ ‘ಶರಣರು ಮತ್ತು ಪರಿಸರ’ ಕುರಿತು ಅವರು ಉಪನ್ಯಾಸ ನೀಡಿದರು.

ಪಶು, ಪ್ರಾಣಿ, ಕ್ರಿಮಿ ಕೀಟ, ಸಸ್ಯ ಸಂಕುಲ ಸಮತೋಲನದಿಂದಿದ್ದರೆ ಜಗತ್ತು ಚೆನ್ನಾಗಿರುತ್ತದೆ. ಪರಿಸರ ಉತ್ತಮವಾಗಿದ್ದರೆ ಮಾತ್ರ ಎಲ್ಲರೂ ಸುಖವಾಗಿ ಬಾಳಲು ಸಾಧ್ಯವಾಗುತ್ತದೆ. ಪರಿಸರದ ಮೇಲೆ ಮಾನವನ ದೌರ್ಜನ್ಯ ನಿಲ್ಲಬೇಕು. ಪಂಚಭೂತಗಳು ದೇವರ ಭಿಕ್ಷೆ. ಅವುಗಳನ್ನು ಕಲುಷಿತಗೊಳಿಸುವುದು ಮನುಷ್ಯನಿಗೆ ಸಲ್ಲದು. ಬಸವಣ್ಣ ಒಂದು ಜೀವಿಗೂ ತೊಂದರೆ ಕೊಡಲಾರೆನೆಂದರು. ಕೊಲ್ಲೆನಯ್ಯ, ಮೆಲ್ಲೆನಯ್ಯ ಎಂದು ದಯವೇ ಧರ್ಮದ ಮೂಲವೆಂದರು. ಭಯದ ಧರ್ಮ ಬೇಡʼ ಎಂದು ತಿಳಿಸಿದರು.

Advertisements

ಸಾನಿಧ್ಯ ವಹಿಸಿದ್ದ ಪ್ರಭುದೇವ ಸ್ವಾಮೀಜಿ ಮಾತನಾಡಿ, ʼಸಸ್ಯಗಳಲ್ಲಿಯೂ ಜೀವ ಇದೆ ಎಂದು ಶರಣರು 900 ವರ್ಷಗಳ ಹಿಂದೆಯೇ ಕಂಡುಕೊಂಡಿದ್ದರು. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭುದೇವರು ಸೇರಿದಂತೆ ಅನೇಕ ಶರಣರು ಪ್ರಕೃತಿ, ಗಿಡ-ಮರಗಳ ಕುರಿತು ತಮ್ಮ ವಚನಗಳಲ್ಲಿ ಉಲ್ಲೇಖಿಸಿದ್ದಾರೆ. ಅವುಗಳನ್ನು ಇಂದು ನಾವು ತಿಳಿದುಕೊಂಡು ಅನುಸರಿಸಬೇಕಿದೆʼ ಎಂದು ಹೇಳಿದರು.

ʼಎಲ್ಲರೂ ಪರಿಸರ ಉಳಿಸುವ ಪಣ ತೊಡಬೇಕು. ಒಬ್ಬ ವ್ಯಕ್ತಿ ವರ್ಷಕ್ಕೆ ಒಂದು ಸಸಿಯಾದರೂ ನೆಟ್ಟು ಬೆಳೆಸಬೇಕು. ಆಗ ಜಗತ್ತು ಸುಂದರವಾಗುತ್ತದೆ. ಮಹಾ ಮಠದಿಂದ ಆರಂಭಿಸಿರುವ ಹಸಿದವರಿಗೆ ಅನ್ನ ಕೊಡುವ ಅನ್ನಪೂರ್ಣ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ಯೋಜನೆಗೆ ಎಲ್ಲರೂ ಸಹಕರಿಸಬೇಕುʼ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಮೋಳಕೇರಿ ಉದ್ಘಾಟಿಸಿದರು. ನೀಲಮ್ಮನ ಬಳಗದ ಸಹೋದರಿಯರು ಪ್ರಾರ್ಥನೆ ನಡೆಸಿಕೊಟ್ಟರು. ಪರುಷಕಟ್ಟೆಯ ಚನ್ನಬಸವಣ್ಣ, ಶ್ಯಾಮಲಾ ಎಲಿ ಸುಶ್ರಾವ್ಯವಾಗಿ ವಚನ ಗಾಯನ ಮಾಡಿದರು.

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಹುದ್ದೆಯಿಂದ ನಿವೃತ್ತರಾದ ಮಲ್ಲಿಕಾರ್ಜುನ ಮೋಳಕೇರಿ, ಶಿಕ್ಷಕ ವೈಜಿನಾಥ ಹುಣಚಗೇರಿ, ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಪರಿಷತ್ ಸದಸ್ಯರಾಗಿ ನೇಮಕಗೊಂಡ ಹಾವಶೆಟ್ಟಿ ಪಾಟೀಲ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶಿವಲಿಂಗ ಹೇಡೆ ಅವರಿಗೆ ಸನ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು.

ಇದನ್ನೂ ಓದಿ : ಬೀದರ್‌ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

ಮಾಣಿಕಪ್ಪ ಗೋರನಾಳೆ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ರಮೇಶ ಮಠಪತಿ ಉಪಸ್ಥಿತರಿದ್ದರು. ಚನ್ನಬಸಪ್ಪ ಹಂಗರಗಿ ಸ್ವಾಗತಿಸಿದರು. ಜಗದೇವಿ ಜಗನ್ನಾಥ ಚಿಮಕೋಡೆ ಗುರುಪೂಜೆಗೈದು, ಭಕ್ತಿ ದಾಸೋಹಗೈದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X