ಕೆಎಂಡಿಸಿಯಲ್ಲಿ ಸಾಲ ವಸೂಲಾತಿಗೆ ಟಾರ್ಗೆಟ್ ನೀಡಿದ ಸಚಿವ ಜಮೀರ್ ಅಹಮದ್ ಖಾನ್

Date:

Advertisements
  • ಮಾಸಿಕ ಪ್ರಗತಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ
  • ಒನ್ ಟೈಮ್ ಸೆಟ್ಲ್ ಮೆಂಟ್‌ ಬಗ್ಗೆ ಸಿಎಂ ಜತೆ ಚರ್ಚೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾಗಿರುವ ಸಾಲ ವಸೂಲಾತಿ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ.

ಕೆಎಂಡಿಸಿ ಭವನದಲ್ಲಿ ಮಂಗಳವಾರ ಜಿಲ್ಲಾ ವ್ಯವಸ್ಥಾಪಕರು ಮತ್ತು ವಸೂಲಾತಿ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, “ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.80ರಷ್ಟು ಪ್ರಗತಿ ಸಾಧಿಸಲೇಬೇಕು” ಎಂದು ಟಾರ್ಗೆಟ್ ನೀಡಿದರು.

“ಮುಂದಿನ ವರ್ಷದ ಮಾರ್ಚ್‌ವರೆಗೂ ಜಿಲ್ಲಾ ವ್ಯವಸ್ಥಾಪಕರು ಮತ್ತು ವಸೂಲಾತಿ ಅಧಿಕಾರಿಗಳನ್ನು ಎಂತಹ ಒತ್ತಡ ಬಂದರೂ ವರ್ಗಾವಣೆ ಮಾಡಬೇಡಿ ಎಂದು ಇಲಾಖೆ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ ಸಚಿವರು, ಅಷ್ಟರೊಳಗೆ ಈಗ ಇದ್ದವರು ಸಾಲ ವಸೂಲಾತಿಯಲ್ಲಿ ಪ್ರಗತಿ ಸಾಧಿಸಲೇಬೇಕು ಎಂದು ಗಡುವು ನೀಡಿದರು.

Advertisements

“ನಿಗಮದಿಂದ ಶಿಕ್ಷಣ, ಉದ್ದಿಮೆ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಡಿ ಪಡೆದಿರುವ 892 ಕೋಟಿ ರೂ. ಸಾಲ ವಸೂಲಾಗಬೇಕಿದ್ದು, ಜಿಲ್ಲಾ ಅಧಿಕಾರಿಗಳು ನಿದ್ದೆ ಮಾಡುತ್ತಿದ್ದೀರಾ. ಸಾಲ ಕೊಡುವುದಷ್ಟೇ ನಿಮ್ಮ ಕೆಲಸವೇ” ಎಂದು ಪ್ರಶ್ನೆ ಮಾಡಿದರು.

ನಿರ್ಲಕ್ಷ್ಯ ಸಹಿಸಲ್ಲ

“ವಸೂಲಾತಿ ಪ್ರಮಾಣ ಶೇ.1ರಿಂದ 10 ರಷ್ಟು ಇದ್ದರೆ ನಮಗೆ ಅಧಿಕಾರಿ ಸಿಬ್ಬಂದಿ ಯಾಕೆ ಬೇಕು. ಇಷ್ಟೊಂದು ವೇತನ ನೀಡಿ ಇಟ್ಟು ಕೊಳ್ಳಬೇಕಾ? ಇನ್ಮುಂದೆ ಈ ರೀತಿಯ ನಿರ್ಲಕ್ಷ್ಯ ಸಹಿಸಲ್ಲ. ಇನ್ಮುಂದೆ ಪ್ರತಿ ತಿಂಗಳು ಜಿಲ್ಲಾ ವ್ಯವಸ್ಥಾಪಕರು ಹಾಗೂ ವಸೂಲಾತಿ ಅಧಿಕಾರಿಗಳು ಪ್ರಗತಿ ವರದಿ ಸಲ್ಲಿಸಬೇಕು. ಉತ್ತಮ ಸಾಧನೆ ಮಾಡಿದವರಿಗೆ ಬಹುಮಾನ ನೀಡಲಾಗುವುದು” ಎಂದು ಘೋಷಿಸಿದರು.

ಈ ಸುದ್ದಿ ಓದಿದ್ದೀರಾ? ಕೇವಲ 11 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್; ಲೋಕಸಭಾ ಚುನಾವಣೆ ಕತೆಯೇನು?

ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆ ಮಾಡಿದ ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಅಧಿಕಾರಿಗಳನ್ನು ಶ್ಲಾಘಿಸಿದ ಸಚಿವರು, ಕಳಪೆ ಪ್ರದರ್ಶನ ತೋರಿರುವ ಬಳ್ಳಾರಿ, ಬೀದರ್, ಬೆಳಗಾವಿ, ಬೆಂಗಳೂರು ಕೇಂದ್ರ, ಶಿವಮೊಗ್ಗ ಜಿಲ್ಲೆಗಳ ಅಧಿಕಾರಿಗಳನ್ನು ಇದೇ ವೇಳೆ ತರಾಟೆಗೆ ತೆಗೆದುಕೊಂಡರು.

“ಸಾಲ ವಸೂಲಾತಿಯಲ್ಲಿ ಉತ್ತಮ ಪ್ರಗತಿ ತೋರಿದ್ದ ಕೆಲವು ಜಿಲ್ಲೆಗಳ ಅಧಿಕಾರಿಗಳು ನಿವೃತ್ತಿ ಆಗಿದ್ದು, ಅವಕಾಶ ಇದ್ದರೆ ಅವರನ್ನು ಗುತ್ತಿಗೆ ಆಧಾರದಲ್ಲಿ ಮರು ನೇಮಕ ಮಾಡಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಸಚಿವರು ನಿರ್ದೇಶನ ನೀಡಿದರು.

ಒನ್ ಟೈಮ್ ಸೆಟ್ಲ್ ಮೆಂಟ್‌ ಬಗ್ಗೆ ಸಿಎಂ ಜತೆ ಚರ್ಚೆ

ನಿಗಮದಿಂದ ನೀಡಿರುವ ಸಾಲ ಪರಿಣಾಮಕಾರಿ ವಸೂಲಾತಿ ನಿಟ್ಟಿನಲ್ಲಿ ಬಡ್ಡಿ ಮನ್ನಾ ಮಾಡುವ ಒಂದಾವರ್ತಿ ತೀರುವಳಿ (ಒನ್ ಟೈಮ್ ಸೆಟ್ಲ್ ಮೆಂಟ್) ಯೋಜನೆ ಜಾರಿ ಬಗ್ಗೆಯೂ ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಆದರೆ ಅದಕ್ಕಿಂತ ಮುಖ್ಯವಾಗಿ ನೀವು ಸಾಲ ವಸೂಲಾತಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ಹಿರಿಯ ಅಧಿಕಾರಿಗಳಿಂದ ಸಿಗಲಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಇದೇ ಸಂದರ್ಭದಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X