ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ‌ರುವ ಸಿಂದಗಿ ತಾಲೂಕಿನ ಬೊರಾಗಿ ಗ್ರಾಮದ ಭೀಮಣ್ಣ ಕೋಟಾರಗಸ್ತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಡಿ ಕೆ ದ್ಯಾವಪ್ಪ ಆಗ್ರಹಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿ, “ಅಸ್ಕಿ ಗ್ರಾಮದಲ್ಲಿ ಹೆಚ್ಚಿನ ಜನರು ಕೊಲಿ ಕಾರ್ಮಿಕರು, ಬಡವರು ಹಾಗೂ ಒಕ್ಕಲಿಗರು ಇದ್ದಾರೆ. ಇದನ್ನೇ ದುರುಪಯೋಗ ಮಾಡಿಕೊಂಡು ಭೀಮಣ್ಣ ಕೋಟಾರಗಸ್ತಿ 2017-18ರಲ್ಲಿ ಬಡ ಜನರಿಗೆ ಮನೆ ಕೊಡುಸುತ್ತೇನೆಂದು ನಂಬಿಸಿ ಅವರ ಆಧಾರ್ ಕಾರ್ಡ್ ಪಡೆದು ತಿದ್ದುಪಡಿ ಮಾಡಿದ್ದಾನೆ” ಎಂದು ಆರೋಪಿಸಿದರು.

ಇದನ್ನೂ ಓದಿದ್ದೀರಾ? ಶ್ರೀರಂಗಪಟ್ಟಣ | ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆ; ಪ್ರವಾಸಿಗರ ಪ್ರವೇಶ, ನದಿ ದಂಡೆಯ ಆಚರಣೆಗೆ ನಿಷೇಧ

Advertisements

“ಅವರ ಹೆಬ್ಬಟ್ಟಿನ ಗುರುತು ಪಡೆದು 50ರಿಂದ 100 ಜನರಿಗೆ ಮೋಸ ಮಾಡಿದ್ದಾನೆ. ಪ್ರತಿ ವ್ಯಕ್ತಿಯಿಂದ ತಲಾ ₹30 ರಿಂದ 50,000 ಪಡೆದಿದ್ದಾನೆ. ಇಲ್ಲಿಯವರೆಗೂ ಮನೆಗಳನ್ನು ಕೊಡದೆ ಮೋಸ ಮಾಡಿದ್ದಾನೆ. ಗ್ರಾಮಸ್ಥರಿಗೆ ಮೊದಲಿನಂತೆ ದಾಖಲೆ ಪತ್ರಗಳನ್ನು ತಿದ್ದುಪಡಿ ಮಾಡಿಸಬೇಕು. ಮೋಸ ಮಾಡಿದ ಆ ವ್ಯಕ್ತಿಯನ್ನು ಕೂಡಲೇ ಬಂದಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಕರವೇ ಜಿಲ್ಲಾ ಉಪಾಧ್ಯಕ್ಷ ಜೈಭೀಮ್ ಮುತ್ತಗಿ, ಸಿಂದಗಿಯ ಸಾಮಾಜಿಕ ಹೋರಾಟಗಾರ ಹರ್ಷವರ್ಧನ ಪೂಜಾರಿ, ಅನಿಲ್ ಗೊಟಖಂಡಕಿ, ಈರಣ್ಣ ಕೂಚಬಾಳ, ದೇವಪ್ಪ ಪೂಜಾರಿ ಹಾಗೂ ಸಂತ್ರಸ್ತ ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X