ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

Date:

Advertisements

ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್‌ ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯ ಸಕಲೇಶಪುರ, ಆಲೂರು, ಹಾಸನ, ಅರಕಲಗೂಡು, ಹೊಳೆನರಸೀಪುರ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಗುರುವಾರ ಸಕಲೇಶಪುರ, ಆಲೂರು, ಹಾಸನ, ಅರಕಲಗೂಡು ಹಾಗೂ ಹೊಳೆನರಸೀಪುರ ತಾಲೂಕುಗಳ‌ ಅಂಗನವಾಡಿ ಹಾಗೂ ಶಾಲೆಗಳಿಗೆ ಮುಂಜಾಗ್ರತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಸಕಲೇಶಪುರ ತಾಲೂಕಿನಾದ್ಯಂತ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳ ಜೊತೆಗೆ ಕಾಲೇಜುಗಳಿಗೂ ಕೂಡ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

Advertisements

ಇದನ್ನೂ ಓದಿದ್ದೀರಾ? ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು

ಹೇಮಾವತಿ ಜಲಾಶಯದ ನೀರಿನ ಮಟ್ಟ

ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ ಇದ್ದು, ಸದ್ಯ ಜಲಾಶಯದಲ್ಲಿ 31.112 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2915.50 ಅಡಿಗಳಷ್ಟಿದೆ. ಸದ್ಯ ಜಲಾಶಯದ ಒಳಹರಿವು 14985 ಕ್ಯೂಸೆಕ್ ಹಾಗೂ ಹೊರಹರಿವು 15,700 ಕ್ಯೂಸೆಕ್ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X