ಶಿವಮೊಗ್ಗ | ಬೊಮ್ಮನಕಟ್ಟೆ ರೌಡಿ ಶೀಟರ್ ಕೊಲೆ ಪ್ರಕರಣ : ಐವರು ಆರೋಪಿಗಳ ಬಂಧನ

Date:

Advertisements

ಶಿವಮೊಗ್ಗ ನಗರದ ಹೊರವಲಯದಲ್ಲಿ ಇತ್ತೀಚಿಗೆ ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ನಡೆದಿದ್ದ ರೌಡಿ ಶೀಟರ್ ಅವಿನಾಶ್ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿನೋಬನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಬೊಮ್ಮನಕಟ್ಟೆ ಬಡಾವಣೆ ನಿವಾಸಿಗಳಾದ ಪ್ರವೀಣ್ (35), ಆನಂದ್ (35), ಸುನೀಲ್ (30), ಜಿತೇಂದ್ರ (28) ಹಾಗೂ ಕಿರಣ್ (34) ಬಂಧಿತರು. ಆರೋಪಿಗಳೆಲ್ಲರು ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೊಲೆಗೀಡಾದ ಅವಿನಾಶ್ ಸಂಬಂಧಿಗಳು ಹಾಗೂ ಪರಿಚಯಸ್ಥರಾಗಿದ್ದಾರೆ ಎಂಬ ಮಾಹಿತಿಯಾಗಿದೆ.

1001809677

ಎರಡು ದಿನಗಳ ಹಿಂದೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂಭಾಗ ಪೊಲೀಸರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ. ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಸಫಲವಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

Advertisements

ಹಳೇ ಬೊಮ್ಮನಕಟ್ಟೆ ಮೊದಲನೇ ತಿರುವಿನ ನಿವಾಸಿಯಾದ ರೌಡಿ ಶೀಟರ್ ಅವಿನಾಶ್ ಎಂಬಾತ, ಜೂ.21 ರಾತ್ರಿ ಮನೆಯಿಂದ ತೆರಳಿದ್ದ. ನಂತರ ಮನೆಗೆ ಹಿಂದಿರುಗಿರಲಿಲ್ಲ. ಜೂ. 22 ರ ಮುಂಜಾನೆ ಬೊಮ್ಮನಕಟ್ಟೆ ಕೆರೆ ಏರಿ ಸಮೀಪ ಅವಿನಾಶ್ ಮೃತದೇಹ ಪತ್ತೆಯಾಗಿತ್ತು. ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.

ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆಗೀಡಾದ ಅವಿನಾಶನು ಆರೋಪಿಯೋರ್ವನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಲಾಗಿದೆ ಎಂಬ ಅಂಶವನ್ನು, ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X