ಉತ್ತರ ಕನ್ನಡ | ಮುಂಡಗೋಡದಲ್ಲಿ ಧರ್ಮಗುರು ದಲೈಲಾಮಾರ 90ನೇ ವರ್ಷದ ಜನ್ಮ ದಿನಾಚರಣೆ

Date:

Advertisements

ಟಿಬೇಟಿಯನ್ ಧರ್ಮಗುರು, ವಿಶ್ವ ಶಾಂತಿ ಮತ್ತು ಕರುಣೆಯ ಪ್ರತೀಕ ದಲೈಲಾಮಾ ಅವರ 90ನೇ ಜನ್ಮದಿನವನ್ನು ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಟಿಬೇಟಿಯನ್ ಶರಣಾರ್ಥಿ ಶಿಬಿರ ಸಂಖ್ಯೆ-6 ರಲ್ಲಿರುವ ಡ್ರೆಪುಂಗ್ ಲೋಸೆಲಿಂಗ್ ಬೃಹತ್ ಬೌದ್ಧ ಮಠದಲ್ಲಿ ಭವ್ಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ, ದಲೈ ಲಾಮಾ ಅವರ ಧ್ಯಾನ, ತತ್ವ ಮತ್ತು ಮಾನವೀಯ ಸಂದೇಶಗಳನ್ನು ಚರ್ಚಿಸುವುದರ ಜೊತೆಗೆ, ಅವರ ದೀರ್ಘಾಯುಷ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಂಕರ್ ಗೌಡಿ ಮಾತನಾಡಿ, “ದಲೈ ಲಾಮಾ ಜಗತ್ತಿಗೆ ಶಾಂತಿ ಮತ್ತು ಕರುಣೆಯ ರಾಯಭಾರಿಯಾಗಿದ್ದು, ಅವರ ಸಂದೇಶಗಳು ಈ ದಿನದ ಜಗತ್ತಿಗೆ ಅತ್ಯಗತ್ಯವಾಗಿವೆ. ಮಾನವೀಯತೆ, ಸಹಿಷ್ಣುತೆ ಮತ್ತು ದಯೆಯ ಬೆಳಕು ಹಂಚುವ ಈ ಮಹಾನ್ ಧರ್ಮಗುರು ಈ ಕಾಲಘಟ್ಟದ ಅತೀವ ಅಗತ್ಯ,” ಎಂದು ಹೇಳಿದರು.

WhatsApp Image 2025 06 26 at 3.27.07 PM

ಈ ಕಾರ್ಯಕ್ರಮದಲ್ಲಿ ಇಂಡೋ-ಟಿಬೇಟಿಯನ್ ಫ್ರೆಂಡ್‌ಶಿಪ್ ಸೊಸೈಟಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಮುಖಂಡರು ಭಾಗಿಯಾಗಿದ್ದರು. ಮಠಾಧೀಶ ಪರಮಪೂಜ್ಯ ಯೇಶಿ ತುಂಡುಪ್ ಲಾಮಾ, ದಲೈ ಲಾಮಾ ಅವರ ತತ್ವವನ್ನು ಪ್ರತಿನಿಧಿಸಿ ಮಾತನಾಡುತ್ತಾ, ಬೌದ್ಧ ತತ್ತ್ವಗಳ ಆಳವನ್ನು ವಿವರಿಸಿದರು.

Advertisements

ಇದನ್ನೂ ಓದಿ: https://eedina.com/world/iran-israel-conventional-war-is-indias-neutral-stance-right/2025-06-26/

ಬೌದ್ಧ ತತ್ತ್ವ, ವಿಶ್ವ ಶಾಂತಿ, ದಲೈ ಲಾಮಾ ಅವರ ಧರ್ಮದರ್ಶನ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ಆಳವಾದ ಚರ್ಚೆ ನಡೆಯಿತು.

WhatsApp Image 2025 06 26 at 3.27.42 PM

ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕ ಎಸ್. ಪಕ್ಕೀರಪ್ಪ, ಮುಂಡಗೋಡ ಘಟಕದ ಲಕ್ಷ್ಮಣ ಭೋವಿವಡ್ಡರ ಮತ್ತು ಪರಶುರಾಮ ಪೂಜಾರ, ಅಂಬೇಡ್ಕರ್ ಸಹಕಾರಿ ಸಂಘದ ಪಿಆರ್‌ಒ ಪ್ರಮೋದ ರತ್ನಾಕರ್ ಮತ್ತು ಪೂಜ್ಯ ಜಂಪಾ ಲಾಮಾ ಗುರೂಜಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X