ಗದಗ | ಅಪಘಾತ ವಿಮೆಯ ಪರಿಹಾರ ಚೆಕ್ ವಿತರಣೆ

Date:

Advertisements

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಟಾಟಾ ವಿಮೆ ಕಂಪನಿಯು 10 ಲಕ್ಷ ರೂಪಾಯಿಯ ವಿಮಾ ಚೆಕ್ ವಿತರಣೆ ಮಾಡಿದೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ತಾರಿಕೊಪ್ಪ ಅಂಚೆ ಸೇವಾನಗರ ನಿವಾಸಿ ರವಿ ಲಮಾಣಿ ನಾಲ್ಕು ತಿಂಗಳ ಹಿಂದೆ 399 ರೂ.ಗಳ ಅಪಘಾತ ವಿಮೆ ಪಾಲಿಸಿ ತೆಗೆದುಕೊಂಡಿದ್ದರು. ಇತ್ತೀಚೆಗೆ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪತ್ನಿ ಲಕ್ಷ್ಮೀ ಲಮಾಣಿ ಅವರಿಗೆ ವಿಮಾ ಕಂಪನಿಯು 10 ಲಕ್ಷ ರೂ.ಗಳ ಚೆಚ್‌ ವಿತರಿಸಿದ್ದಾರೆ.

ಚೆಚ್‌ ಹಸ್ತಾಂತರಿಸಿ ಮಾತನಾಡಿದ ಗದಗ ಅಂಚೆ ವಿಭಾಗದ ಅಧೀಕ್ಷಕ ಚಿದಾನಂದ ಪದ್ಮಶಾಲಿ, “ಅತೀ ಕಡಿಮೆ ಮೊತ್ತದ ವಿಮಾ ಕಂತನ್ನು ತೆಗೆದುಕೊಂಡು 10 ಲಕ್ಷ ಮೊತ್ತದ ವಿಮಾ ಹಣವನ್ನು ವಾರಸುದಾರರಿಗೆ ನೀಡುತ್ತಿರುವುದು ಅಂಚೆ ಇಲಾಖೆಯ ಸಾರ್ಥಕ ಸೇವೆಯಾಗಿದೆ. ಮೃತರ ಕುಟುಂಬದ ಮುಂದಿನ ನಿರ್ವಹಣೆಗೆ ಸಹಾಯವಾಗಲಿದೆ. ಈ ಪಾಲಿಸಿಯಿಂದ ಕೇವಲ ಮರಣ ಹೊಂದಿದವರಿಗೆ ಮಾತ್ರವಲ್ಲದೇ ಅಪಘಾತದಿಂದ ಗಾಯಗೊಂಡವರಿಗೂ ಆಸ್ಪತ್ರೆಯ ಖರ್ಚನ್ನು ವಿಮಾ ಪಾಲಿಸಿಯು ನೀಡುತ್ತದೆ” ಎಂದರು.

Advertisements

ಇಂಡಿಯಾ ಪೊಸ್ಟ್ ಪೇಮೆಂಟ್ ಬ್ಯಾಂಕ್‌ನ ಉತ್ತರ ಕರ್ನಾಟಕ ವಲಯದ ಮುಖ್ಯ ಪ್ರಭಂದಕ ರಾಣು ಅಗರವಾಲ್ ಮಾತನಾಡಿ, “ಟಾಟಾ ಅಪಫಾತ ವಿಮೆ ಅತೀ ಕಡಿಮೆ ಕಂತನ್ನು ಹೊಂದಿದ್ದು, ಅತೀ ಹೆಚ್ಚಿನ ಮೊತ್ತದ ವಿಮೆಯನ್ನು ನೀಡುತ್ತಿದೆ. ಈ ರೀತಿಯ ಉತ್ತಮ ವಿಮಾ ಸೌಲಭ್ಯ ಬೇರೆ ಯಾವ ವಿಮಾ ಸಂಸ್ಥೆಗಳಲ್ಲಿ ಕೂಡಾ ಇರುವುದಿಲ್ಲ. ಅಂಚೆ ಇಲಾಖೆಯಿಂದ ಈ ವಿಮಾ ಪಾಲಿಸಿ ಸೌಲಭ್ಯವು ಗ್ರಾಮೀಣ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ” ಎಂದು ತಿಳಿಸಿದರು.

ಗದಗ ಐಪಿಬಿಬಿಯ ಮೇನೇಜರ್ ಆನಂದಸಾಗರ ಮಾತನಾಡಿ, “ಗದಗ ಶಾಖೆಯಲ್ಲಿ ಮೊದಲ ಅಪಘಾತ ವಿಮೆಯನ್ನು ನೀಡುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನರು ಈ ಸೌಲಭ್ಯ ಪಡೆದುಕೊಳ್ಳಬೇಕು” ಎಂದರು. ವಿಮಾ ಪಾಲಿಸಿಯನ್ನು ಮಾಡಿಸಿ ಬಡ ಕುಟುಂಬಕ್ಕೆ ಸಹಾಯ ಮಾಡಲು ಕಾರಣರಾದ ತಾರೀಕೊಪ್ಪ ಶಾಖಾ ಅಂಚೆ ಪಾಲಕ ಬಸವರಾಜ ಮಡಿವಾಳರ್ ಅವರನ್ನು ಪ್ರಶಂಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X