SCP/TSP ಅನುದಾನ ಬೇರೆ ಉದ್ದೇಶಗಳಿಗೆ ಬಳಸಿದರೆ ಅಧಿಕಾರಿಗಳ ವಿರುದ್ಧ ಕ್ರಮ: ಹೆಚ್ ಸಿ ಮಹದೇವಪ್ಪ

Date:

Advertisements
  • ಸೆಕ್ಷನ್‌ 7ಡಿ ರದ್ದುಪಡಿಸಿರುವ ಸಂಗತಿ ಅಧಿಕಾರಿಗಳ ಗಮನದಲ್ಲಿರಲಿ
  • ಆರ್‌ಟಿಇ, ಶಿಕ್ಷಣದ ಪ್ರಮಾಣ 9 ರಿಂದ 10 ನೇ ತರಗತಿಗೆ ಏರಿಸಲು ಕ್ರಮ

ದಲಿತರ ಪಾಲಿಗೆ ಒಂದು ರೀತಿಯಲ್ಲಿ ಮಾರಕವಾಗಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್‌ 7ಡಿ ರದ್ದುಪಡಿಸಿರುವ ಸಂಗತಿಯನ್ನು ಎಲ್ಲ ಅಧಿಕಾರಿಗಳೂ ಗಮನದಲ್ಲಿಟ್ಟುಕೊಳ್ಳಬೇಕು. SCP/ TSP ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸದೇ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದ ಏಳಿಗೆಗೆ ಮಾತ್ರ ಬಳಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ SCP/ TSP ಅನುದಾನದ ಹಂಚಿಕೆಯ ಕುರಿತಂತೆ ವಿಕಾಸಸೌಧದಲ್ಲಿ ಜರುಗಿದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಅನುದಾನ ಬಳಕೆ ಕುರಿತು ನಿರ್ದೇಶನ ನೀಡಿದರು.

SCP/TSP ಕಾಯ್ದೆಯ ಉದ್ದೇಶಕ್ಕೆ ಅನುಗುಣವಾಗಿ ಎಲ್ಲ ಇಲಾಖೆಗಳಲ್ಲಿ ಯಾವ ರೀತಿ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರಗತಿಯ ಸ್ಥಿತಿಗತಿ ಏನಾಗಿದೆ ಮತ್ತು ಪ್ರಗತಿಯ ಹಾದಿಯಲ್ಲಿ ಇಲಾಖೆಗಳು ಏನಾದರೂ ಕೊರತೆಗಳನ್ನು ಎದುರಿಸುತ್ತಿವೆಯೇ? ಎಂಬ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು.

Advertisements

“ಜಲಜೀವನ್ ಮಿಷನ್‌ನಲ್ಲಿ ಸಾಮಾನ್ಯವಾಗಿ ಕೇಂದ್ರ ಸರ್ಕಾರದ ಶೇ.50 ಹಣ ಮತ್ತು ರಾಜ್ಯ ಸರ್ಕಾರದ ಶೇ.50 ಹಣ ಇದ್ದು, ಈ ಪೈಕಿ ಜಲಜೀವನ್ ಮಿಷನ್‌ನಲ್ಲಿ ರಾಜ್ಯದ ಹಣದ ಪಾಲು ಹೆಚ್ಚಾಗಿದೆ. ಜನವರಿ ವೇಳೆಗೆ ಕೇಂದ್ರದಿಂದ ಅಗತ್ಯ ಅನುದಾನ ಪಡೆಯಬೇಕು. ಇಲ್ಲವಾದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಹಣವನ್ನು ಹಿಂಪಡೆಯಲಾಗುವುದು” ಎಂದು ಸಚಿವರು ತಿಳಿಸಿದರು.

“ಮೂಲ ಸೌಕರ್ಯಗಳಾದ ರಸ್ತೆಗಳ ವಿಷಯದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅದರ ಗುಣಮಟ್ಟದ ಅವಧಿ 50 ವರ್ಷ ಇರಬೇಕು. ಹಾಗಿದ್ದಾಗ ಮಾತ್ರ ಪದೇ ಪದೇ ರಸ್ತೆಗಳ ಮೇಲೆ ಅನುದಾನ ಬಳಸುವುದು ತಪ್ಪುತ್ತದೆ. ಆ ಅನುದಾನವನ್ನು ಇತರೆ ಕೆಲಸಗಳಿಗೆ ಬಳಸಬಹುದು” ಎಂದು ಸಚಿವರು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಆರ್‌ಎಸ್‌ ಅವಿಶ್ವಾಸ ನಿರ್ಣಯ ಮಂಡನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕಡ್ಡಾಯವಾಗಿ 100 ದಿನಗಳ ನರೇಗಾ ಕೆಲಸ ನೀಡಬೇಕು. ಆಗ ಅವರ ಬದುಕಲ್ಲಿ ಒಂದಷ್ಟು ಧನಾತ್ಮಕ ಬದಲಾವಣೆ ತರಬಹುದು ಎಂದು ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಉನ್ನತ ಶಿಕ್ಷಣ ಇಲಾಖೆಯಲ್ಲಿ SCP/TSP ಕಾಯ್ದೆಯಡಿ ಬಳಸದೇ ಇರುವ ಅನುದಾನದ ಬಳಕೆಗೆ ಸೂಕ್ತ ಪ್ರಾಶಸ್ತ್ಯ ನೀಡಬೇಕು ಮತ್ತು ಹಾಸ್ಟೆಲ್ ಕಾಲೇಜುಗಳ ಮೂಲಸೌಕರ್ಯದ ಅಭಿವೃದ್ದಿಗೆ ಒತ್ತು ನೀಡಿ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕು” ಎಂದು ಕಟ್ಟುನಿಟ್ಟಾಗಿ ಹೇಳಿದರು.

ಆರ್ ಟಿ ಇ ಶಿಕ್ಷಣ ಕಾಯ್ದೆ

“ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳ ಶಾಲಾ ನೋಂದಣಿ ಪ್ರಮಾಣವು ನೆರೆಯ ರಾಜ್ಯಗಳಿಗಿಂತ ಕಡಿಮೆ ಇದ್ದು, ನೊಂದಣಿಯ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಆರ್ ಟಿ ಇ ಶಿಕ್ಷಣ ಕಾಯ್ದೆ ಅಡಿಯಲ್ಲಿ ಈಗ ಇರುವ 1 ರಿಂದ 8 ನೇ ತರಗತಿ ಶಿಕ್ಷಣದ ಪ್ರಮಾಣವನ್ನು 9 ರಿಂದ 10 ನೇ ತರಗತಿಗೆ ಏರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಗಮನಕ್ಕೆ ತರಲಾಯಿತು.

ಕೃಷಿ, ಸಾರಿಗೆ, ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಇನ್ನೂ ಹಲವು ಇಲಾಖೆಗಳಲ್ಲಿ ಆಗುತ್ತಿರುವ ಪ್ರಗತಿಯ ಮಟ್ಟವನ್ನು ಪರಿಶೀಲಿಸಿದ ಸಚಿವರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದ ಹಂಚಿಕೆಯು ಸಮರ್ಪಕವಾಗಿ ಬಳಕೆಯಾಗಬೇಕು. ಇಲ್ಲದೇ ಹೋದಲ್ಲಿ ಆ ಅನುದಾನವನ್ನು ಹಿಂಪಡೆಯಲಾಗುವುದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X