ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆಯಬೇಕು: ದತ್ತಾತ್ರೇಯ ಹೊಸಬಾಳೆ

Date:

Advertisements

ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದಿ’ ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಗ್ರಹಿಸಿದ್ದಾರೆ.

ನವ ದೆಹಲಿಯ ಡಾ. ಅಂಬೇಡ್ಕರ್ ಅಂತಾ ರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಂದಿರಾ ಗಾಂಧಿ ಅವರು 1975ರ ಜೂನ್ 25ರಂದು ತುರ್ತುಪರಿಸ್ಥಿತಿ ಹೇರಿದ್ದರು. ಆ ಸಂದರ್ಭದಲ್ಲಿ ‘ಸಮಾಜವಾದಿ’ ಹಾಗೂ ‘ಜಾತ್ಯಾತೀತ ಪದಗಳನ್ನು ಸಂವಿಧಾನದ ಪ್ರಸ್ತಾವನೆಯಲ್ಲಿ ಸೇರಿಸಲಾಗಿತ್ತು” ಎಂದು ಹೇಳಿದರು.

“ನಾನು ಈ ವಿಷಯವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನ ಕಟ್ಟಡದಲ್ಲಿ (ಅಂಬೇಡ್ಕರ್ ಅಂತಾ ರಾಷ್ಟ್ರೀಯ ಕೇಂದ್ರ) ಹೇಳುತ್ತಿದ್ದೇನೆ, ಅವರ ಸಂವಿಧಾನವು ಪೀಠಿಕೆಯಲ್ಲಿ ಈ ಪದಗಳನ್ನು ಇರಲಿಲ್ಲ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸಾವಿರಾರು ಜನರನ್ನು ಜೈಲಿಗಟ್ಟಲಾಗಿತ್ತು. ನ್ಯಾಯಾಂಗ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿತ್ತು. ಆ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಬಲವಂತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು’ ಎಂದು ಆರೋಪಿಸಿದರು.

Advertisements

“ತುರ್ತು ಪರಿಸ್ಥಿತಿ ಹೇರಿದಕ್ಕಾಗಿ ಕಾಂಗ್ರೆಸ್ ಪಕ್ಷ ದೇಶದ ಕ್ಷಮೆ ಕೇಳಬೇಕು. ತುರ್ತು ಪರಿಸ್ಥಿತಿ ಹೇರಿದವರೇ ಇಂದು ಸಂವಿಧಾನದ ಪ್ರತಿಗಳನ್ನು ಕೈಯಲ್ಲಿ ಹಿಡಿದು ಕೊಂಡು ಅಡ್ಡಾಡುತ್ತಿದ್ದಾರೆ. ಆದರೆ ಇದೂವರೆಗೂ ಅವರು ದೇಶದ ಕ್ಷಮೆ ಕೇಳಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಇವ ಯಾವ ದೊಡ್ಡ ಮನುಷ್ಯ ಅಂತ ಈತನ ಮಾತು ಕೇಳಬೇಕು.
    ಈ ಸಂಘಿಗಳ ಮಾತಿಗೆ ಯಾವುದೇ ಬೆಲೆ ಕೊಡಬಾರದು.
    ಜೈ ಸಂವಿಧಾನ, ಜೈ ಭೀಮ್.

  2. ಆ ಪದದ ಅರ್ಥ ಗೊತ್ತಿಲ್ಲ ಈ ಮನುಷ್ಯನಿಗೆ
    ಜಾತಿ ವ್ಯವಸ್ಥೆ ಇರಬೇಕು ಎಂಬ ಮಾತು ಈತನದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X