ತೆಲಂಗಾಣ | ಉಮೇದುದಾರಿಕೆಯಲ್ಲಿ ಅಕ್ರಮ ; ಬಿಆರ್‌ಎಸ್‌ ಶಾಸಕ ವೆಂಕಟೇಶ್ವರ ರಾವ್‌ ಅನರ್ಹಗೊಳಿಸಿದ ಹೈಕೋರ್ಟ್‌

Date:

Advertisements
  • 2018ರ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ವೆಂಕಟೇಶ್ವರ ರಾವ್‌ ತಪ್ಪು ಆಸ್ತಿ ವಿವರ ಸಲ್ಲಿಕೆ ಆರೋಪ
  • ಶಾಸಕ ವೆಂಕಟೇಶ್ವರ ರಾವ್‌ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದ ಸೋತ ಅಭ್ಯರ್ಥಿ ಜಲಗಂ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಉಮೇದುದಾರಿಕೆಯಲ್ಲಿ ಆಸ್ತಿ ವಿವರದ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಕೊತಗುಡೆಂನ ಕ್ಷೇತ್ರದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ವನಮಾ ವೆಂಕಟೇಶ್ವರ ರಾವ್‌ ಅವರನ್ನು ರಾಜ್ಯ ಹೈಕೋರ್ಟ್‌ ಬುಧವಾರ (ಜುಲೈ 28) ಅನರ್ಹಗೊಳಿಸಿ ಆದೇಶ ನೀಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ವೆಂಕಟೇಶ್ವರ ರಾವ್‌ ನಂತರದ ಸ್ಥಾನ ಪಡೆದಿದ್ದ ಬಿಆರ್‌ಎಸ್‌ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಜಲಗಂ ವೆಂಕಟ ರಾವ್‌ ಅವರನ್ನು ಚುನಾಯಿತ ಅಭ್ಯರ್ಥಿ ಎಂದು ನ್ಯಾಯಾಲಯ ಘೋಷಿಸಿದೆ.

ತೆಲಂಗಾಣದ ಚುನಾವಣೆಯಲ್ಲಿ ವೆಂಕಟೇಶ್ವರ ರಾವ್‌ ಅವರು ಈ ಮುನ್ನ ಕಾಂಗ್ರೆಸ್‌ನಿಂದ ಚುನಾಯಿತರಾಗಿದ್ದರು. ಬಳಿಕ ಇತರ 12 ಶಾಸಕರೊಂದಿಗೆ ಬಿಆರ್‌ಎಸ್‌ ಸೇರಿದ್ದರು.

Advertisements

ಆದರೆ ವೆಂಕಟೇಶ್ವರ ರಾವ್‌ ವಿರುದ್ಧ ಬಿಆರ್‌ಎಸ್ (ಈ ಮುನ್ನ ಟಿಆರ್‌ಎಸ್‌ ಅಥವಾ ತೆಲಂಗಾಣ ರಾಷ್ಟ್ರ ಸಮಿತಿ ಎಂದು ಕರೆಯಲಾಗುತ್ತಿತ್ತು) ಸದಸ್ಯರಾಗಿದ್ದ ಜಲಗಂ ಅವರು ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದರು.

ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಾಧಾ ರಾಣಿ ಅರ್ಜಿ ವಿಚಾರಣೆ ನಡೆಸಿ ವೆಂಕಟೇಶ್ವರ ರಾವ್‌ ಅವರನ್ನು ಅಮಾನತುಗೊಳಿಸಿ ₹5 ಲಕ್ಷ ದಂಡ ವಿಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಇಂಟರ್‌ನೆಟ್‌ ಸ್ಥಗಿತ ತೆರವು; ಸಾಮಾಜಿಕ ಮಾಧ್ಯಮಕ್ಕೆ ನಿರ್ಬಂಧ ಮುಂದುವರಿಕೆ

ಈ ವರ್ಷಾಂತ್ಯ ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. 2024ರ ಜನವರಿ 16ರಂದು ಚುನಾವಣೆ ಕೊನೆಗೊಳ್ಳಲಿದೆ.

ವೆಂಕಟೇಶ್ವರ ರಾವ್‌ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮ್ಮ ಹಾಗೂ ತಮ್ಮ ಪತ್ನಿಯ ಆಸ್ತಿಯ ವಿವರ ಪೂರ್ಣ ಮಾಹಿತಿ ನೀಡಿಲ್ಲ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X